ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….!

ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ.




ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ ಜಾನುವಾರು ಹೊಡೆಯಲು ಹೋದ ಯುವತಿ ಅಕಸ್ಮಿಕವಾಗಿ ಬಿದ್ದು ಬಲಭಾಗದ ತೊಡೆ ತೀವ್ರ ಗಾಯಗೊಂಡಿದ್ದು ಕಾಲಿನಲ್ಲಿ ರಕ್ತ ಸುರಿಯುತ್ತಿದ್ದರೂ ಕೂಡಾ ಅಸ್ಪತ್ರೆಯ ಸಿಬ್ಬಂದಿಗಳು ವೈದ್ಯರಿಲ್ಲ ಎಂದು ಪ್ರಥಮ ಚಿಕಿತ್ಸೆ ನೀಡದೇ ನಿರ್ಲಕ್ಷö್ಯದಿಂದ ನೋಡಿಕೊಂಡು ಓಡಾಡುತ್ತಿದ್ದರು. ಅಲ್ಲದೇ ನಾಯಿ ಕಚ್ಚಿದ ಮಹಿಳೆಯೊಬ್ಬರು ಟಿಟಿ ಚುಚ್ಚುಮದ್ದು ಪಡೆಯಲು ಹೋದರೆ ನಮ್ಮಲ್ಲಿ ಟಿಟಿ ಇಂಜೆಕ್ಷನ್ ಇಲ್ಲ  ಖಾಸಗಿ ಮೆಡಿಕಲ್‌ಗೆ ಚೀಟಿ ಕೊಟ್ಟು ತರುವಂತೆ ಕಳುಹಿಸಿದ ಪ್ರಸಂಗ ಸಹ ನಡೆಯುತ್ತಿದ್ದು ಸುಸಜ್ಜಿತ ಪ್ರಾಥಮಿಕ ಅರೋಗ್ಯ ಕೇಂದ್ರವಿದ್ದರೂ ಸರಿಯಾದ ಸಮಯಕ್ಕೆ ವೈದ್ಯಾಧಿಕಾರಿಗಳು ಹಾಜರಾಗದೇ ಇರುವುದರಿಂದ  ಈ ಆಸ್ಪತ್ರೆ ಆನಾಥವಾಗುವಂತಾಗಿದೆ.

ಸುತ್ತಮುತ್ತ 76 ಹಳ್ಳಿಗಳು ಈ ಪ್ರಾಥಮಿಕ ಆರೋಗ್ಯ ಕೇಂದ್ರವ್ಯಾಪ್ತಿಗೆ ಒಳಪಡುತ್ತಿದ್ದು ಸುಮಾರು 45 ಸಾವಿರ ಜನಸಂಖ್ಯೆಯನ್ನು ಹೊಂದಿದ್ದು ಅರಸಾಳು-ಕೆಂಚನಾಲ-ಬೆಳ್ಳೂರು-ಹೆದ್ದಾರಿಪುರ-ಅಮೃತ-ಚಿಕ್ಕಜೇನಿ-ಬಾಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಗೋಡು ತಿಮ್ಮಪ್ಪ ಹರತಾಳು ಹಾಲಪ್ಪ ಹೀಗೆ ಇಬ್ಬರು ಪ್ರಮುಖ ರಾಜಕೀಯ ನಾಯಕರು ಆಯ್ಕೆಯಾಗಿ ಬಂದರು ಈ ಸರ್ಕಾರಿ ಅಸ್ಪತ್ರೆಗೆ ಕಾಯಕಲ್ಪ ದೊರಕಿಸುವಲ್ಲಿ ಸಂಪೂರ್ಣ ವಿಫರಾಗಿದ್ದಾರೆ.




ಇಲ್ಲಿನ ಸರ್ಕಾರಿ ಅಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ದ ಪ್ರತಿಭಟನೆಗಳು ಹೋರಾಟಗಳು ನಡೆಸಲಾದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಈ ವೈದ್ಯಾಧಿಕಾರಿ ಬದಲಾಯಿಸಿದರೆ ಈ ಊರಿಗೆ ಡಾಕ್ಟರ್‌ಗಳು ಬರಲು ಸುತರಾಂ ಒಪ್ಪುವುದಿಲ್ಲ ನೀವು ಯಾರಾದರೂ ಡಾಕ್ಟರ್ ಬರುತ್ತಾರೆಂದು ಹೇಳಿದರೆ ನಾನು ಇರುವ ವೈದ್ಯಾಧಿಕಾರಿಯನ್ನು ಬದಲಾಯಿಸುತ್ತೇವೆಂದು ಇಬ್ಬರು ಜನನಾಯಕರು ದೂರು ನೀಡಲು ಹೋದವರಿಗೆ ಸಮಜಾಯಿಸಿ ನೀಡಿ ಕಳುಹಿಸಿದ್ದಾರೆ ಹಾಗಾದರೆ ಇರುವ ವೈದ್ಯಾಧಿಕಾರಿಗಳಿಗೆ ಲಂಗು ಲಗಾಮು ಇಲ್ಲದೇ ಎಷ್ಟು ಹೊತ್ತಿಗೆ ಬರುವುದು ಹೋಗುವುದಾದರೆ ಈ ಭಾಗದ ಅನಾರೋಗ್ಯ ಪೀಡಿತರ ಮತ್ತು ರೋಗಿಗಳ ಹಾಗೂ ತುರ್ತು ಸಂದರ್ಭದಲ್ಲಿ ಏನಾದರೂ ಅವಘಡಗಳು ಸಂಭವಿಸಿದರೆ ಏನು ಗತಿಯೆಂದರೆ ದೇವರೇ ಗತಿಯನ್ನುವಂತಾಗಿದೆ.

ಇನ್ನಾದರೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಇತ್ತ ಗಮಹರಿಸಿ ತಕ್ಷಣ ಮಲೆನಾಡಿನ ರೈತನಾಗರೀಕರ ತುರ್ತು ಸೇವೆಗೆ ಸ್ಪಂದಿಸುವರೇ ಕಾದುನೋಡುವಂತಾಗಿದೆ.




ಅಲ್ಲದೆ ಔಷಧಿ ಚುರ್ಚುಮದ್ದಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದರೊಂದಿಗೆ ಪಾರ್ಮಸಿಗಳು ಸಹ ಈ ಅಸ್ಪತ್ರೆಗೆ ನಿಯೋಜತರಾಗಿದ್ದು ವಾರದ ಮೂರುದಿನ ಎಂದು ಹೇಳಿಕೊಂಡು ಸಮಯಕ್ಕೆ ಸರಿಯಾಗಿ ಹಾಜರಾಗದೇ ಬೇಕಾಬಿಟ್ಟಿ ಬಂದು ಹೋಗುವುದರಿಂದಾಗಿ ಸಕಾಲದಲ್ಲಿ ಔಷಧಿಗಳು ಮಾತ್ರೆಗಳು ಚುರ್ಚುಮದ್ದುಗಳು ಇಲ್ಲದೇ ಖಾಸಗಿ ಅಸ್ಪತ್ರೆಗಳಿಗೆ ಅಲೆಯುವಂತಾಗಿದೆ ಎಂದು ತಮ್ಮ ಅಸಹಾಯಕತೆಯನ್ನು ಮಾದ್ಯಮಗಳ ಮುಂದೆ ರೋಗಿಗಳು ಹಂಚಿಕೊಂಡರು.


ವರದಿ : ಕೆ ಎಂ ಬಸವರಾಜ್



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

2 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

15 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

16 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

20 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

20 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

20 hours ago