ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ.
ಸಿಟಿ ಬಸ್ಸೊಂದು ಸಿಗ್ನಲ್ ಜಂಪ್ ಮಾಡಿ ಸ್ಕೂಟರ್ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರ ತೀವ್ರ ತರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿದ್ದ ಆಕ್ರೋಶಿತ ಯುವಕರು ಸಿಟಿ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ.
ಅಲ್ಲದೆ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಮಹಾವೀರ ವೃತ್ತದಲ್ಲಿ ಗೋಪಿ ವೃತ್ತದ ಕಡೆಯಿಂದ ಬಂದ ಸಿಟಿ ಬಸ್ಸು ಸಿಗ್ನಲ್ ಜಂಪ್ ಮಾಡಿ ರೈಲ್ವೆ ನಿಲ್ದಾಣದ ರಸ್ತೆ ಕಡೆ ನುಗ್ಗಿದೆ. ಆದರೆ ಇದೇ ವೇಳೆ ಸರ್.ಎಂ.ವಿ.ರಸ್ತೆ ಕಡೆಯಿಂದ ಸಿಗ್ನಲ್ ಬಿಟ್ಟಿದ್ದರಿಂದ ಇಕ್ಬಾಲ್ ಮೊಹಮದ್ (69) ಹೆಸರಿನ ವ್ಯಕ್ತಿ ಹೊಂಡಾ ಆಯಕ್ಟಿವಾ ಬಂದಿದ್ದು, ಅದು ಸಿಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ನೆಲಕ್ಕೆ ಬಿದ್ದ ಪರಿಣಾಮ ಆತನ ತಲೆಗೆ ಗಾಯವಾಗಿದೆ. ತಕ್ಷಣ ಬೈಕ್ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ಸಿನ ಚಾಲಕನ ತಪ್ಪಿನಿಂದಾಗಿ ರೊಚ್ಚಿಗೆದ್ದ ಸ್ಥಳೀಯ ಯುವಕರು ಸಿಟಿ ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಚಾಲಕ ಪ್ರದೀಪನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ. ಇದರಿಂದ ಡ್ರೈವರ್ ಬಸ್ಸು ಬಿಟ್ಟು ಕೆಳಕ್ಕೆ ಇಳಿದಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಸ್ಥಳಕ್ಕೆ ಬಂದ ಜಯನಗರ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದು, ಬಸ್ಸು ಮತ್ತು ಬೈಕ್ನ್ನು ಟ್ರಾಫಿಕ್ ಪೊಲೀಸರು ತೆಗೆದುಕೊಂಡು ಹೋಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್