ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಘಟನೆಯ ಹಿನ್ನಲೆ :
ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ ರೂ ಮೌಲ್ಯದ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ಕಳುವಾಗಿತ್ತು.
ರೇಣುಕಮ್ಮ ತನ್ನ ಸೊಸೆ ಹೇಮಾವತಿ ಮತ್ತು ಪಕ್ಕದ ಮನೆಯ ಸತೀಶ್ ಎಂಬುವರ ಮೇಲೆ ಅನುಮಾನ ವ್ಯಕ್ತಪಡಿಸಿ ತುಂಗನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ದಾಖಲಿಸಿಕೊಂಡ ತುಂಗ ನಗರ ಪೊಲೀಸರು ತನಿಖೆ ಕೈಗೊಂಡು ಸೊಸೆ ಹೇಮಾವತಿ ಮತ್ತು ನೆರೆಯ ಮನೆಯವನಾದ ಸತೀಶ್ ರನ್ನು ಬಂಧಿಸಿದ್ದಾರೆ.
ಸತೀಶ್ ಎಂಬುವವನಿಗೆ ರೇಣುಕಮ್ಮ ರವರ ಸೊಸೆ ಹೇಮಾವತಿ ಅತ್ತೆಯ ಚಿನ್ನಾಭರಣವನ್ನು ಮತ್ತು ಹಣವನ್ನು ಕದ್ದು ಕೊಟ್ಟಿದ್ದಳು.
ಸದರಿ ಆರೋಪಿ ಚಿನ್ನಾಭರಣವನ್ನು ಅಡವಿಟ್ಟು ಹಣ ಪಡೆದಿದ್ದನು. 14 ಸಾವಿರ ರೂ. ಹಣದಲ್ಲಿ 12 ಸಾವಿರ ರೂ ಹಣ ಖರ್ಚು ಮಾಡಿದ್ದನು.
ಪ್ರಕರಣದ ಆರೋಪಿತರು ಮತ್ತು ಕಳುವಾದ ಮಾಲಿನ ಪತ್ತೆ ಬಗ್ಗೆ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ, ಹೆಚ್ಚುವರಿ ಜಿಲ್ಲಾರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ ಮಾರ್ಗ ದರ್ಶನದಲ್ಲಿ, ಡಿವೈಎಸ್ಪಿ ಬಾಲರಾಜ್, ತುಂಗ ನಗರ ಪೊಲೀಸ್ ಠಾಣೆಯ ಪಿಐ ಮಂಜುನಾಥ್ ಬಿ, ನೇತೃತ್ವದಲ್ಲಿ ಪಿಎಸ್ಐ ರಾಜುರೆಡ್ಡಿ ಬೆನ್ನೂರು, ಕುಮಾರ್ ಕುರಗುಂದ, ಎಎಸ್ಐ ಮನೋಹರ್ ಮತ್ತು ಸಿಬ್ಬಂಧಿಗಳಾದ ಹೆಚ್.ಸಿ ಕಿರಣ್ ಮೋರೆ, ಅರುಣ್ ಕುಮಾರ್, ಮೋಹನ್ ಕುಮಾರ್, ಪಿಸಿ ನಾಗಪ್ಪ, ಹರೀಶ್ ನಾಯ್ಕ, ಲಂಕೇಶ್, ಕಾಂತರಾಜ್, ಅರಿಹಂತ, ಹರೀಶ್, ಸಂತೋಷ್,ರಮೇಶ್, ಶಿವಕುಮಾರ್, ರಾಘವೇಂಧ್ರ, ಜಯ್ಯಪ್ಪ ರವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್