SSLC ಫಲಿತಾಂಶ ಪ್ರಕಟ : ಚಿತ್ರದುರ್ಗ ಪ್ರಥಮ,ಯಾದಗಿರಿಗೆ ಕೊನೆ ಸ್ಥಾನ – ರಾಜ್ಯದಲ್ಲಿಯೇ 625ಕ್ಕೆ 625 ಪಡೆದ ನಾಲ್ವರು ವಿದ್ಯಾರ್ಥಿಗಳಿವರು!


ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಅನೇಕ ಮಂದಿ ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈಯುವ ಮೂಲಕ ಊರಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ (SSLC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ.

ಈ ಬಾರಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ.ಶಿವಮೊಗ್ಗ ಜಿಲ್ಲೆ 29ನೇ ಸ್ಥಾನದಲ್ಲಿದೆ.

ಈ ಬಾರಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ (96.80 %) ಪಡೆದುಕೊಂಡಿದ್ದು, ಮಂಡ್ಯ ಎರಡನೇ ಸ್ಥಾನ ಪಡೆದುಕೊಂಡಿದೆ. ಹಾಸನ ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಕೊನೆ ಸ್ಥಾನ ಪಡೆದುಕೊಂಡಿದೆ. ರಾಜ್ಯದ 4 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ.

ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದು, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
3,41,108 ಬಾಲಕರು, 3,59,511 ಬಾಲಕಿಯರು ಪಾಸಾಗಿದ್ದಾರೆ. SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23 ಹಾಗೂ SSLC ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12 ಎಂಬುದಾಗಿ ತಿಳಿದು ಬಂದಿದೆ.2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ (SSLC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ರಷ್ಟು ಫಲಿತಾಂಶ ಬಂದಿದೆ.ಮಾರ್ಚ್ 31 ರಿಂದ ಆರಂಭವಾಗಿದ್ದ ಎಸ್‌ಎಸ್ ಎಲ್ ಸಿ ಪರೀಕ್ಷೆಗಳು ಏಪ್ರಿಲ್ 15 ಕ್ಕೆ ಮುಕ್ತಾಯಗೊಂಡಿದ್ದವು. ಎಸ್‌ಎಸ್ ಎಲ್ ಸಪರೀಕ್ಷೆಯನ್ನು 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಎಸ್‌ಎಸ್ ಎಲ್ ಸಿ ಮೌಲ್ಯಮಾಪನಕ್ಕೆ 62 ಸಾವಿರ ಶಿಕ್ಷಕರನ್ನು ನಿಯೋಜನೆ ಮಾಡಲಾಗಿತ್ತು.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.

2023ರ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಮಂಡ್ಯ ಎರಡನೇ ಮತ್ತು ಹಾಸನ 3ನೇ ಸ್ಥಾನ ಪಡೆದಿದೆ. ಇಡೀ ರಾಜ್ಯದಲ್ಲಿ 625ಕ್ಕೆ 625 ಅಂಕವನ್ನು 4 ವಿದ್ಯಾರ್ಥಿಗಳು ಪಡೆದಿದ್ದಾರೆ.

4 ವಿದ್ಯಾರ್ಥಿಗಳು ಹೆಸರು ಮತ್ತು ಶಾಲೆಯ ಹೆಸರು:
ಭೂಮಿಕಾ- ನ್ಯೂ ಮೆಕಾಲೆ ಇಂಗ್ಲಿಷ್ ಹೈ ಸ್ಕೂಲ್ ಹೊಸೂರು ಮೈನ್ ರೋಡ್ ಬೆಂಗಳೂರು
ಯಶಸ್ ಗೌಡ- ಬಾಲಗಂಗಾಧರ ನಾಥ ಸ್ವಾಮೀಜಿ ಹೈ ಸ್ಕೂಲ್ ಚಿಕ್ಕ ಬಳ್ಳಾಪುರ
ಭೀಮನ ಗೌಡ ಹನುಮಂತ್ ಗೌಡ- ಆಕ್ಸ್ಫರ್ಡ್ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್, ಮುದ್ದೇಬಿಹಾಳ
ಅನುಪಮಾ ಶ್ರೀಶಲ್ ಹಿರೇಹೊಳಿ- ಶ್ರೀ ಕುಮಾರೇಶ್ವರ್ ಹೈ ಸ್ಕೂಲ್ ಬೆಳಗಾವಿ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

13 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

13 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

13 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

18 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

20 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago