ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಆಯನೂರಿನಲ್ಲಿರುವ ಬಾರ್’ನಲ್ಲಿ ಕ್ಯಾಶಿಯರ್ ಒಬ್ಬನಿಗೆ ಪೊಲೀಸರೆದುರಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಸೊರಬ ಮೂಲದ ಸಚಿನ್ (27) ಹತ್ಯೆಯಾದ ಯುವಕನಾಗಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ಚಾಕುದಿಂದ ಚುಚ್ಚಿದ್ದು ತೀವ್ರ ಗಾಯಗೊಂಡ ಈತನನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ.
ಘಟನೆಯ ಹಿನ್ನಲೆ
ಕಳೆದ ಹಲವು ದಿನಗಳಿಂದ ಬಾರ್ ನಲ್ಲಿ ಕುಡಿದು ಹಣ ನೀಡದ ಹೋಗುತ್ತಿದ್ದ ಆಯನೂರು ತಾಂಡಾ ನಿವಾಸಿಗಳಾದ ನಿರಂಜನ್ ,ಸತೀಶ್ ಹಾಗೂ ಅಶೋಕ್ ಕಳೆದ ರಾತ್ರಿ ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯದ ವರೆಗೂ ಮದ್ಯಪಾನ ಮಾಡುತ್ತಿದ್ದರು.
ಬಾರ್ ಬಂದ್ ಮಾಡುವ ಸಮಯವಾದರೂ ಯುವಕರು ಮದ್ಯಪಾನ ಮಾಡುತ್ತಲೇ ಇದ್ದರು. ಬಾರ್ ಸಿಬ್ಬಂದಿ ಅವರ ಬಳಿ ತೆರಳಿ ಸಮಯವಾಯಿತು ಎಂದು ತಿಳಿಸಿದ್ದಾರೆ. ಆದರೆ, ತಾವಿನ್ನೂ ಮದ್ಯ ಸೇವಿಸಬೇಕೆಂದು ಹೇಳಿ ಕಳುಹಿಸಿದ್ದಾರೆ.
ಸಹಾಯಕ ಕ್ಯಾಶಿಯರ್ ಬಂದು ಸಮಯವಾಯಿತು ಎಂದು ತಿಳಿಸಿದರೂ ಯುವಕರು ಕೇಳಲಿಲ್ಲ. ತಕ್ಷಣ ಆತ 112 ಪೊಲೀಸ್ ಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಪೊಲೀಸರು ಬಂದಿದ್ದೇ ಕ್ಯಾಶಿಯರ್ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆ ವೇಳೆ ಯುವಕರಲ್ಲಿ ಒಬ್ಬ ಬೀಯರ್ ಬಾಟಲಿಯಿಂದ ಸಹಾಯಕ ಕ್ಯಾಶಿಯರ್ ಮೇಲೆ ಹಲ್ಲೆ ಮಾಡಿದ್ದಾನೆ. ಅವನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅದೇ ವೇಳೆ ಮತ್ತೊಬ್ಬ ಯುವಕ ಚಾಕುದಿಂದ ಕ್ಯಾಶಿಯರ್’ಗೆ ಏಕಾಏಕಿ ಚುಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.
ನಂತರ ಆಯನೂರು ಆಸ್ಪತ್ರೆಗೆ ಸಚಿನ್ ನನ್ನು ಕರೆತಂದು ಚಿಕಿತ್ಸೆ ನೀಡಲು ಪ್ರಯತ್ನಿಸಲಾಯಿತು ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಸಚಿನ್ ನನ್ನು ಶಿವಮೊಗ್ಗಕ್ಕೆ ರವಾನಿಸಲಾಯಿತು.
ಆದರೆ ಶಿವಮೊಗ್ಗಕ್ಕೆ ಸಾಗಿಸುತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಸಚಿನ್ ಕೊನೆ ಉಸಿರೆಳೆದಿದ್ದಾನೆ.
ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್