ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ ಇದರ  ಶಾಪ ಕಾಂಗ್ರೆಸ್ ಗೆ ತಟ್ಟದೆ ಇರದು ಎಂದು ಹೇಳಿದರು.

ನಿರುದ್ಯೋಗ ಭತ್ಯೆ ಗ್ಯಾರೆಂಟಿ ಎಂದು ಈಗ ಈ ವರ್ಷದ ಯುವಕರಿಗೆ ಮಾತ್ರ ಗ್ಯಾರೆಂಟಿ ಎಂದಿದ್ದಾರೆ ವಿದ್ಯುತ್ ಉಚಿತವೆಂದು ಹೇಳಿ ದರ ಏರಿಸಿದೆ. ಕೈಗಾರಿಕೆಗಳು ಪ್ರತಿಭಟನೆ ಮಾಡಿತ್ತಿದ್ದಾರೆ.  ಈಗ ಬಿಜೆಪಿ ದರ ಏರಿಸಿದೆ ಎಂದು ಆರೋಪಿಸಿ ಪಲಾಯನ  ಮಾಡುತ್ತಿದ್ದಾರೆ ಆರೋಪಿಸಿದರು.

ಮಹಿಳೆಯರಿಗೆ ಉಚಿತ ಪ್ರಯಾಣವೆಂದು ಆಟೋ, ಖಾಸಗಿ ಬಸ್ ಇತರೆ ಸಾರಿಗೆ ಗಳು ಅನ್ಯಾಯವಾಗುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿರುವುದು ಸಂತೋಷ ಆದರೆ ಉಳಿದವರ ಪಾಡೇನು?, ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರ ಅರ್ಜಿ ಪಡೆಯಲು ಇನ್ಬೂ ಆಗಿಲ್ಲ‌. ಯೋಜನೆ ಜಾರಿ ಮಾಡದೇ ಹೇಗೆ ಸುಮ್ಮನಿರ್ತಾರೆ ನೋಡ್ತೀವಿ ಎಂದು ಸವಾಲು ಎಸೆದಿದ್ದಾರೆ.

ಮಹಿಳೆಯರಿಗೆ ಮತ್ತು ಇತರರಿಗೆ ಅನ್ಯಾಯವಾಗುತ್ತಿದೆ. ಗೊಂದಲಗಳು ಹೆಚ್ಚಿದೆ. ಮೋಸ ಆಗಿದೆ. 10 ಕೆಜಿ ಅಕ್ಕಿಕೊಡಲು ಆಗದಿದ್ದರೆ ಹಣ ವನ್ನ ಅವರ ಬ್ಯಾಂಕ್ ಅಕೌಂಟ್ ಗೆ ಹಾಕಿ ಎಂದರು.

ಮತಾಂತರ ನಿಷೇಧ ಕಾಯ್ದೆ ರದ್ದಿನ ಬಗ್ಗೆ ಮಾತನಾಡುತ್ತಿದ್ದಾರೆ ಡಿಕೆಶಿ ಅವರು ತಮ್ಮ ಮನೆಯ ಮಕ್ಕಳು ಮತಾಂತರವಾಗಿದ್ರೆ ಸುಮ್ಮನಿರ್ತಿದ್ದರಾ? ಕೇರಳ ಸ್ಟೋರಿ ನೋಡುದ್ರಾ? ಮೋಸದಿಂದ ಮತಾಂತರ ಮಾಡಿ ಇತರೆ ಧರ್ಮಿಯರನ್ನ ಹೇಗೆ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನ ಚಿತ್ರದಲ್ಲಿ ತೋರಿಸಲಾಗಿದೆ. ಇವುಗಳನ್ನ ನಿಯಂತ್ರಿಸದಿದ್ದರೆ ಲವ್ ಜಿಹಾದ್ ನಂತಹ ಕೃತ್ಯಗಳು ಹೆಚ್ಚಾಗುತ್ತೆ. ಇದನ್ನ ನಾವು ನಿಯಂತ್ರಿಸುದ್ವಿ ಆದರೆ ನೀವು ಮತಾಂತರ ಮಾಡಲು ಫ್ರೀ.. ಬಿಡುವ ಮೂಲಕ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಅವಾಂತರ ಸೃಷ್ಟಿಸಲು ಹೊರಟಿದ್ದೀರಿ.

ತಾಪಂ ಜಿಪಂ ಮತ್ತು ಲೋಕಸಭಾ ಚುನಾವಣೆಯಲ್ಲಿ ನಿಮಗೆ ಜನ ತಕ್ಕ ಪಾಠ ಕಲಿಸುತ್ತಾರೆ.  ವಾಪಾಸ್ ಪಡೆಯದಿದ್ದರೆ ಪ್ರತಿಭಟನೆ ಅನಿವಾರ್ಯವಾಗಿದೆ. ಸರ್ಕಾರಕ್ಕೆ ಸಮಯ ಕೊಡಬೇಕಿತ್ತು. ತಕ್ಷಣ ತೊಂದರೆ ಆದಾಗ ಪ್ರತಿಭಟನೆಯನ್ನ ಬಿಜೆಪಿ ನಡೆಸಿಕೊಂಡು ಬಂದಿದೆ. ಪಠ್ಯ ಪುಸ್ತಕದ ವಿರುದ್ಧ ಜನಜಾಗೃತಿ ಮಾಡುತ್ತೇವೆ. ಮತಾಂತರದ ಬಗ್ಗೆ ಹಿಂದೂ ಸಂಘಟನೆಗಳ ಜೊತೆ ಕೆಲಸ ಮಾಡುತ್ತೇವೆ ಎಂದರು.

ವಿಪಕ್ಷ ಸ್ಥಾನವನ್ನ ಯಾವಗ ಮಾಡಬೇಕು ನೋಡಿಕೊಂಡು ಮಾಡುತ್ತೇವೆ. ಅದನ್ನ ಕಾಂಗ್ರೆಸ್ ಹೇಳಿದ ತಕ್ಷಣ ನಾಡಬೇಕು ಎಂಬ ನಿಯಮವಿಲ್ಲ ಎಂದ ಈಶ್ವರಪ್ಪ‌ ಹೊಂದಾಣಿಕೆ ಕುರಿತು ಸಂಸದ ಪ್ರತಾಪ ಸಿಂಹ ಮತ್ತು ಸಿಟಿ ರವಿ ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಯಾವ ಕ್ಷೇತ್ರದ‌ಲ್ಲಿ ಆಗಿದೆ. ಇದನ್ನ ಮಾಹಿತಿ ಪಡೆದು ಒಂದು ವೇಳೆ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂಬ ಮಾಹಿತಿ ಲಭ್ಯವಾದರೆ ಅದರ ವಿರುದ್ಧವೂ ಕೇಂದ್ರ ನಾಯಕರ ಗಮನಕ್ಕೆ ತರಲಿದ್ದೇನೆ  ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

16 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

18 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago