ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ|araga

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ;-ಗೃಹ ಸಚಿವನಾಗಿ ಕ್ಷೇತ್ರದ ರಾಜ್ಯ ಸುತ್ತಿದರೂ ಕೂಡಾ ಕ್ಷೇತ್ರದ ಮತದಾರರ ಮತ್ತು ಕಾರ್ಯಕರ್ತರ  ಮೂಲಭೂತ  ಸಮಸ್ಯೆಗಳಿಗೆ ಸ್ಪಂದಿಸಿ ಗತ್ತು ಗೈರತು ಜನರೊಂದಿಗೆ ಬೆರತು ಪ್ರೀತಿ ವಿಶ್ವಾಸದಿಂದಿರುವುದಕ್ಕೆ ಮರು ಅಯ್ಕೆ ಮಾಡಿದ್ದಾರೆಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆದ್ದಾರಿಪುರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ  ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಅಭಿನಂದನಾ ಸಭೆಯನ್ನುದ್ದೇಶಿ ಮಾತನಾಡಿ ಹಾವು ಮುಗಿಸಿಯಂತಿದ್ದ ಕಿಮ್ಮನೆ ರತ್ನಾಕರ್ ಮತ್ತು ಮಂಜುನಾಥಗೌಡ ಚುನಾವಣೆಯ ಸಂದರ್ಭದಲ್ಲಿ ಜೋಡೆತ್ತುಗಳಾಗಿ ಒಂದೇ ಹಾರಕ್ಕೆ ಕೊರಳು ಒಡ್ಡಿದರೂ  ಕೂಡಾ ಕ್ಷೇತ್ರದ ಮತದಾರರು
ನನ್ನ ಕೈಬಿಡದೆ ಗೆಲಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಅವರ ಋಣವನ್ನು ನಾನು ತೀರಿಸಬೇಕಾಗಿದೆ ಎಂದು ಹೇಳಿದರು.

ಕಾಂಗ್ರೇಸ್ ಗೆದ್ದಿಲ್ಲ ಗ್ಯಾರಂಟಿ ಕಾರ್ಡ್ ಗೆದ್ದಿದೆ ಎಂದ ಅವರು 60 ವರ್ಷಗಳ ಕಾಲ ಅಧಿಕಾರ ಅನುಭವಿಸಿದ ಕಾಂಗ್ರೆಸ್ ಪಕ್ಷಕ್ಕೆ ಮತದಾರರಲ್ಲಿ ಹೇಳಿಕೊಳ್ಳುವಂತಂಹ ಸಾಧನೆಗಳೇನು ಇರಲ್ಲಿಲ್ಲ ಗ್ಯಾರಂಟಿ ಕಾರ್ಡ್ ಮೂಲಕ ಮತದಾರರಿಗೆ ಅಸೆ ತೋರಿಸುವ ದುಸ್ಥಿತಿ ಕಾಂಗ್ರೇಸ್ ಪಕ್ಷಕ್ಕೆ ಬಂದಿದೆ ಎಂದರು. ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ದೊಡ್ಡಣ್ಣನಂತಿರುವ ಅಮೇರಿಕಾ ಸೇರಿದಂತೆ ಇತರ ರಾಷ್ಟçಗಳು ಹಾಡಿ ಹೊಗುಳು ಮೂಲಕ ಗೌರವ ತೋರಿಸುತ್ತಿದ್ದರೆ ನಮ್ಮ ದೇಶದ ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ನಾಯಕ ಸಂಸದ ರಾಹುಲ್‌ಗಾಂಧಿಯವರು ವಿದೇಶದಲ್ಲಿ ದೇಶದ ಪ್ರದಾನಿಯ ವಿರುದ್ದ ಅವಹೇಳನವಾಗಿ ಹೇಳಿಕೆ ನೀಡುತ್ತಿರುವುದು ಅವರ ಪಕ್ಷದ ಘನತೆ ಗೌರವನ್ನು ಬಿಂಬಿಸುತ್ತದೆAದು ವಿಷಾದವ್ಯಕ್ತಪಡಿಸಿ ನಾಡಿನ ಮತದಾರರಿಗೆ ಈಗಾಗಲೇ ಕಾಂಗ್ರೆಸ್ ಪಕ್ಷದ ನಾಟಕ ಗೊತ್ತಾಗುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಹಲವು ಅಭಿವೃದ್ದಿ ಕಾರ್ಯಗಳಿಗೆ ಹಿಂದಿನ ಸರ್ಕಾರ ಬಿಡುಗಡೆ ಮಾಡಿದಂತಹ ಅನುಧಾನವನ್ನು ತಡೆಹಿಡಿದಿರುವುದರಿಂದ ಕ್ಷೇತ್ರದಲ್ಲಿ 200 ಕೋಟಿ ರೂ ವೆಚ್ಚದ ಅಭಿವೃದ್ದಿ ಕಾರ್ಯಗಳಿಗೆ ಭಾರಿ ಹಿನ್ನಡೆಯಾಗಿದೆ ಎಂದು ಸಭೆಯಲ್ಲಿ ವಿವರಿಸಿ ಏನೇ ಅದರೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ವಿರೋಧ ಪಕ್ಷದಲ್ಲಿದ್ದರೂ ಕೂಡಾ ಅಭಿವೃದ್ದಿಯೇ ನಮ್ಮ ಮೂಲದ್ಯೇಯವಾಗಿದ್ದು ಅದನ್ನು ಸಾಧ್ಯಯವಾದಷ್ಟು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಅಭಿನಂದನಾ ಸಮಾರಂಭದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನವೀನ್ ಹೆದ್ದೂರು, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಿತ್ರಮ್ಮ,ಉಪಾಧ್ಯಕ್ಷೆ ಲಲಿತಾಪುಂಡಲೀಕ್,ಪಕ್ಷದ ಮುಖಂಡರಾದ ಕಲ್ಲೂರು ನಾಗೇಂದ್ರ,ರಾಮಪ್ಪ,ಕುಮಾರಸ್ವಾಮಿ, ಕೆ.ವಿ.ಲಿಂಗಪ್ಪಕಗ್ಗಲಿ,ವಿಶು, ಗಿರೀಶ್ ಜಂಬಳ್ಳಿ,ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

44 minutes ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

1 hour ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

2 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

9 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

10 hours ago

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

22 hours ago