ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು|ವರನ ಕುಟುಂಬದ ನಡೆಗೆ ಶ್ಲಾಘನೆ|ANP

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು

ತಂದೆಯನ್ನು ಕಳೆದುಕೊಂಡ ನೋವಿನ ಮಧ್ಯೆ ಸಹೋದರಿಯರು ಹಸೆಮಣಿ ಏರಿದರು.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೆಂಜಿಗಾಪುರ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಬುಧವಾರ ತಬ್ಬಲಿಗಳಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನೆರವೇರಿಸಿ ಸಂಬಂಧಿಗಳು ಮಾದರಿಯಾದರು.




ಬನವಾಸಿಯ ಮಂಜುನಾಥ್ ರವರ ಪುತ್ರಿಯರಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನಿಶ್ಚಯವಾಗಿ ಸಕಲ ಸಿದ್ಧತೆ ಮುಗಿದಿತ್ತು. ಇದಕ್ಕಾಗಿ ಇಬ್ಬರು ಹೆಣ್ಣು ಮಕ್ಕಳು ತಂದೆಯೊಂದಿಗೆ ತಮ್ಮ ತಾಯಿಯ ತವರು ಮನೆಯಾದ ಚೆನ್ನಕೊಪ್ಪದ ರುದ್ರಪ್ಪ ಗೌಡರ ಮನೆಗೆ ಆಗಮಿಸಿದ್ದರು. ಮದುವೆ ಮುನ್ನಾ ದಿನವಾದ ಮಂಗಳವಾರ ಈ ಇಬ್ಬರು ಮದುವಣಗಿತ್ತಿಯರ ತಂದೆ ಮಂಜುನಾಥ ಗೌಡರು ಚನ್ನಕೊಪ್ಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದರು.

ಇಬ್ಬರು ಪುತ್ರಿಯರ ಅಜ್ಜ (ತಾಯಿಯ ತಂದೆ) ರುದ್ರಪ್ಪ ಗೌಡರು ಪೂರ್ವನಿಗದಿಯಂತೆ ಮದುವೆ ನಡೆಸಲು ನಿರ್ಧರಿಸಿ ವರನ ಕಡೆಯವರಿಗೆ ದೂರವಾಣಿ ಮೂಲಕ ತಿಳಿಸಿದ್ದರು.




ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಶಿವಾನಂದ ಪಾಟೀಲ್, (ಸಿದ್ದಪ್ಪ ಗೌಡ)ರ ಇಬ್ಬರು ಪುತ್ರರಾದ ವಿಶ್ವನಾಥ ಪಾಟೀಲ್, ಶ್ರೀನಾಥ ಪಾಟೀಲ್‌ಗೆ ಕೊಟ್ಟು ನಿರ್ಧರಿಸಲಾಗಿತ್ತು.

ವರನ ಕಡೆಯವರು ನಿಗದಿತ ಮುಹೂರ್ತದಲ್ಲೇ ಮದುವೆ ನಡೆಯಲು ಒಪ್ಪಿಗೆ ಸೂಚಿಸಿದ ಕಾರಣ ರುದ್ರಪ್ಪ ಗೌಡರ ಕುಟುಂಬಸ್ಥರು ಯಥಾವತ್ತಾಗಿ ವಿವಾಹ ನಡೆಯಲಿದೆ ಎಂದು ಬಂಧು-ಬಳಗಕ್ಕೆ ದೂರವಾಣಿ ಮೂಲಕ ತಿಳಿಸಿದ್ದರು. ವಿವಾಹ ಸಮಾರಂಭಕ್ಕೆ ವರನ ಕಡೆಯಿಂದ ಸುಮಾರು 200 ಜನ ಮತ್ತು ವಧುವಿನ ಕಡೆಯಿಂದ 600ಕ್ಕೂ ಅಧಿಕ ಜನರು ಆಗಮಿಸಿದ್ದರು. ಬಹುತೇಕ ಬಂಧುಗಳು ಇಬ್ಬರು ಹೆಣ್ಣು ಮಕ್ಕಳಿಗೆ ಶುಭ ಕೋರಿ ತಂದೆಯ ಮರಣದ ದುಃಖದ ಸಾಂತ್ವನ ಹೇಳಿದ ದೃಶ್ಯ ಕಂಡುಬಂತು. ಹೆಣ್ಣು ಮಕ್ಕಳ ತಾಯಿ ಕೂಡ ಮೂರು ವರ್ಷದ ಹಿಂದೆ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು.

ವರನ ಕುಟುಂಬದ ನಡೆಗೆ ಶ್ಲಾಘನೆ

ಸಾಗರದ ಸಮಾಜ ಸೇವಕರಾದ ಮಾ.ಸ.ನಂಜುಂಡಸ್ವಾಮಿ ಮತ್ತು ರಾಘವೇಂದ್ರ ಅವರು ಮದುವೆಯ ಸಭಾಭವನಕ್ಕೆ ಆಗಮಿಸಿ ಹೆಣ್ಣು ಮಕ್ಕಳ ಭವಿಷ್ಯದ ಬದುಕು ಹಸನಾಗಿರಲಿ ಎಂದು ಶುಭ ಕೋರಿದರು. ಮದುವೆ ನಿಶ್ಚಯವಾಗಿದ್ದ ಸಂದರ್ಭದಲ್ಲಿ ಕುಟುಂಬಸ್ಥರು ಅಥವಾ ಬಂಧುಗಳು ಮೃತರಾದರೆ ಅಪಶಕುನವೆಂದು ಮದುವೆ ಸಂಬಂಧ
ಕಡಿದುಕೊಳ್ಳುವ ಮೂಢನಂಬಿಕೆ ಮತ್ತು ಕಂದಾಚಾರ ಎಲ್ಲೆಡೆ ಸಾಮಾನ್ಯವಾಗಿದೆ. ಆದರೆ ಯತ್ತಿನಹಳ್ಳಿಯ ಶಿವಾನಂದ ಪಾಟೀಲರ ವಿಶಾಲ ಮನೋಭಾವ ಮತ್ತು ಸಹೃದಯತೆ ಬಗ್ಗೆ ಅಭಿನಂದಿಸಿ ಶ್ಲಾಘಿ ಸಿದರು. ಇದೇ ರೀತಿ ವಿವಿಧ ಸಮಾಜ ಸೇವಕರು ಮತ್ತು ಸಂಘ-ಸಂಸ್ಥೆ ಪದಾಧಿಕಾರಿಗಳು ವರನ ಕಡೆಯವರನ್ನು ಅಭಿನಂದಿಸಿದರು.




ಮಧ್ಯರಾತ್ರಿ ಅಂತ್ಯಸಂಸ್ಕಾರ

ಅಪಘಾತದಲ್ಲಿಮೃತಪಟ್ಟ ಮಂಜುನಾಥ ಗೌಡರ ಅಂತ್ಯಸಂಸ್ಕಾರ ಬನವಾಸಿಯಲ್ಲಿ ಮಧ್ಯರಾತ್ರಿ 1.30ರ ಸುಮಾರಿಗೆ ನೆರವೇರಿತು. ಶವದೊಂದಿಗೆ ಅಲ್ಲಿ ಹೋಗಿ ರುದ್ರಭೂಮಿಯಲ್ಲಿ ಅಂತಿಮ ನಮನ ಸಲ್ಲಿಸಿದ ಬಹುತೇಕ ಸಂಬಂಧಿಕರು ಬೆಳಗ್ಗೆ ಮನೆಗೆ ತೆರಳಿ ಸ್ನಾನ ಇತ್ಯಾದಿ ಕಾರ್ಯ ಮುಗಿಸಿ ಮದುವೆಗೆ ಆಗಮಿಸಿ ತಮ್ಮ ಮಾನವೀಯತೆ ಮೆರೆದರು.




ವರದಿ : ಎನ್ ಡಿ ಹೆಗಡೆ


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

2 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

2 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

17 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

17 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

23 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago