ತೀರ್ಥಹಳ್ಳಿ ತಾಲೂಕಿನಲ್ಲಿ ಅಶ್ಲೀಲ ವಿಡಿಯೋ ,ವೇಶ್ಯಾವಾಟಿಕೆ ಜಾಲ ಬಯಲು ಬಳಿಕ ಇದೀಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಹನಿಟ್ರ್ಯಾಪ್ ಎಂದು ಹೆಸರಿಡಲಾಗಿದ್ದು ಈ ಪ್ರಕರಣದಲ್ಲಿ ಮೂವರನ್ನ ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಹಿನ್ನಲೆ :
ಅರಣ್ಯ ಇಲಾಖೆಯ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೊಬ್ಬರು ನೀವು ನಮ್ಮ ಸ್ಟುಡಿಯೋ ದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.ಈ ಕರೆ ಅಧಿಕಾರಿ ಮತ್ತು ಮಹಿಳೆಯ ಜೊತೆ ಸಲುಗೆಯಿಂದ ಇರುವಂತೆ ಮಾಡಿದೆ.
ಸಲುಗೆ ಹೆಚ್ಚಾಗಿ ಮಹಿಳೆಯೊಂದಿಗೆ ಮನೆಯಲ್ಲಿ ಇದ್ದಾಗ ಈ ಮಹಿಳೆಯ ಮತ್ತೊಂದು ಗ್ಯಾಂಗ್ ಬಂದು ಕದ ತಟ್ಟಿದ್ದಾರೆ. ಆಗ ಅಧಿಕಾರಿಯ ನಗ್ನ ಫೋಟೊ ತೆಗೆದು ಅಧಿಕಾರಿಗೆ 15 ಲಕ್ಷದ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.ಈ ಗ್ಯಾಂಗ್ ಹಂತ ಹಂತವಾಗಿ ಅಧಿಕಾರಿಗಳಿಂದಹಣ ಪೀಕಿದ್ದಾರೆ. ಗ್ಯಾಂಗ್ ನ ಹಣದ ವಸೂಲಿಬಾಜಿ ಅಧಿಕಾರಿಯನ್ನು ಜಿಗುಪ್ಸೆಗೆ ಒಳಪಡಿಸಿದೆ.
ಕೊನೆಗೆ ಬೇಸತ್ತ ಅಧಿಕಾರಿ ತೀರ್ಥಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯಲ್ಲಿ ಧನುಷ್, ಅನ್ಸರ್, ಕಾರ್ತಿಕ್, ಪುಂಡ, ಸಿದ್ದಿಕಿ ಮೋಹಿತ್ ಗೌಡ ಹಾಗೂ ಅನನ್ಯ ಯಾನೆ ಸೌರಭ ಎಂಬುವವರ ವಿರುದ್ಧ ದೂರು ದಾಖಲಾಗಿದೆ.
ಅನನ್ಯ, ಮೋಹಿತೆ ಗೌಡ ಹಾಗೂ ಸಿದ್ದಿಕ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಏಳು ಜನ ಆರೋಪಿತರಲ್ಲಿ ಮೂವರು ಬಂಧಿತರಾಗಿದ್ದು ಉಳಿದ ನಾಲ್ವರು ತಲೆಮರೆಸಿಕೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್