ನಿರ್ಮಲ ಗ್ರಾಮ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಅನೈರ್ಮಲ್ಯದತ್ತ…??? ಎಲ್ಲೆಂದರಲ್ಲಿ ಕಸ ಹರಡಿಕೊಂಡು ದುರ್ನಾತ ಬೀರುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ……!

ಕಸ ವಿಲೇವಾರಿ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಷಯದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಗೆ ಅನೈರ್ಮಲ್ಯದ ಸೋಂಕು ಮೆತ್ತಿಕೊಂಡಿದೆ.

ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಳೆಯ ಕಸ ವಿಲೇವಾರಿ ಘಟಕದಲ್ಲಿರುವ ತ್ಯಾಜ್ಯಗಳನ್ನು ನೋಡಿದರೆ ಹಾಗನಿಸದೇ ಇರದು.

2022 ರಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸನಗರ ರಸ್ತೆಯ ಗವಟೂರು ಹೊಳೆಯ ಸಮೀಪದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಯಿತು.ಪ್ರಸ್ತುತ ಅಲ್ಲಿಯೇ ಕಸ ವಿಲೇವಾರಿ ಕೆಲಸಗಳು ನಡೆಯುತ್ತಿದೆ.


2015 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದ ಕೃಷ್ಣಬೈರೆಗೌಡರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅಂದಿನ ಜಿ.ಪಂ.ಸಿ.ಇ.ಓ ಸೆಂಥಿಲ್ ಮತ್ತು ವೈಶಾಲಿ ರವರೊಂದಿಗೆ ಬೆಳಂಬೆಳಗ್ಗೆ ದಿಡೀರ್ ಭೇಟಿ ನೀಡಿ ತ್ಯಾಜ್ಯವಿಲೆವಾರಿ ಘಟಕದ ನಿರ್ವಹಣೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ದೇಶವ್ಯಾಪಿ ಸಾಕಷ್ಟು ಪ್ರಚಾರ ಗಿಟ್ಟಿಸಿಕೊಂಡಂತಹ ಇಲ್ಲಿನ ತೀರ್ಥಹಳ್ಳಿ ರಸ್ತೆಯ ಮುಖ್ಯರಸ್ತೆಯಿಂದ ಹೊಸನಗರ ಸಂಪರ್ಕದ ಲಿಂಕ್ ರಸ್ತೆಯಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಓವರ್‌ಹೆಡ್ ಟ್ಯಾಂಕ್ ಸಹ ತೆರೆದುಕೊಂಡಿದ್ದು ಇದರಿಂದ ಉತ್ಪತ್ತೊಯಾಗುವ ಹುಳಗಳು ಟ್ಯಾಂಕ್ ನ ನೀರಿಗೆ ಬಿದ್ದು ಇದೇ ನೀರನ್ನು ಸಾರ್ವಜನಿಕರು ಕುಡಿಯುವಂತಾಗಿದೆ.


ಹಳೇ ಘಟಕದಲ್ಲಿರುವ ಕಸವನ್ನು ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿರುವ ಕಸದಿಂದ ಅಪಾಯಕಾರಿ ಸೊಳ್ಳೆಗಳು ಹಾಗೂ ಇನ್ನಿತರ ಕ್ರಿಮಿ ಕೀಟಗಳು ಉತ್ಪತ್ತಿಯಾಗುತ್ತಿದ್ದು, ಪರಿಸರದಲ್ಲಿ ವಾಸಿಸುವ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯನ್ನೆದುರಿಸುತ್ತಿದ್ದಾರೆ.  ಈ ಪರಿಸರ ದುರ್ವಾಸನೆಯಿಂದ ತುಂಬಿದ್ದು ಈ ಪರಿಸರದಲ್ಲಿ ವಾಸಿಸುವ ಜನ ಮೂಗು ಮುಚ್ಚಿ ತಿರುಗುವಂತಾಗಿದೆ..ದನಕರುಗಳು ಈ ಕಸದ ರಾಶಿಯಲ್ಲಿ ಆಹಾರ ಹುಡುಕಿಕೊಂಡು ಪ್ಲಾಸ್ಟಿಕ್‌ ತಿಂದು ಸಾವಿಗೀಡಾಗುತ್ತಿವೆ.


ಈ ಘಟದಲ್ಲಿಯೇ ನೀರಿನ ಎರಡು ಓವರ್ ಹೆಡ್ ಟ್ಯಾಂಕ್ ಇದ್ದು ಅಲ್ಲಿಂದಲೇ ಪಟ್ಟಣಕ್ಕೆ ನೀರು ಸರಬರಾಜಾಗುತಿದ್ದು ಅಂತಹ ಕಲುಷಿತ ನೀರನ್ನು ಗ್ರಾಮ ಪಂಚಾಯಿತಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ರೋಗಗ್ರಸ್ಥ ತ್ಯಾಜ್ಯವಿಲೆವಾರಿ ಘಟಕಕ್ಕೆ ಸಮೀಪದಲ್ಲಿ ಮೇರಿಮಾತಾ ಪ್ರೌಢಶಾಲೆ ಮತ್ತು ಗುಡ್‌ಶಪರ್ಡ್ ಚರ್ಚ್ ಶಬರೀಶ ನಗರ ಗಾಂಧಿನಗರ ಬಡಾವಣೆ ಹೊಂದಿಕೊಂಡಂತೆ ಇದೆ. ಗ್ರಾಮಾಡಳಿತ ಹಾಗೂ ನೂತನ ಶಾಸಕ ಗೋಪಾಲಕೃಷ್ಣ ಮತ್ತು ಜಿಲ್ಲಾ ಪಂಚಾಯ್ತಿ ಸಿಇಓ ಡಿಹೆಚ್‌ಓ ಇತ್ತ ಗಮಹರಿಸುವುದರೊಂದಿಗೆ ರೋಗಗ್ರಸ್ಥ ತ್ಯಾಜ್ಯವಿಲೆವಾರಿ ಘಟಕಕ್ಕೆ ಮುಕ್ತಿ ಕಾಣಿಸುವರೇ ಕಾದೊನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

13 hours ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 days ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

2 days ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

2 days ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

2 days ago