Headlines

ಬಸ್ಸಿಗಾಗಿ ಕಾಯುತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳುವು|theft

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ.

ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು  ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. 

ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ ಹತ್ತಲು ಪ್ಲ್ಯಾಟ್ ಫಾರಂ ನಂಬರ್​ 10  ರಲ್ಲಿ ಬಸ್ ಗಾಗಿ ಕಾಯುತ್ತಿದ್ದಾರೆ. ಸಮಯ ಸುಮಾರು 03-30 ಗಂಟೆಯಾಗಿತ್ತು. ಬಳಿಕ ಶಿರಾಳಕೊಪ್ಪ-ಶಿರಸಿ ರೂಟ್​ ನ ಬಸ್​ ಬಂದಿದೆ. ಬಸ್ ಹತ್ತಿ ಟಿಕೆಟ್ ಮಾಡಿಸಲು ಹೊರಟಾಗ ವ್ಯಾನಿಟಿ ಬ್ಯಾಗ್ ಜಿಪ್ ಓಪನ್ ಆಗಿರುವುದು ಕಂಡು ಬಂದಿದೆ. ಅನುಮಾನ ಬಂದು ನೋಡಿದಾಗ,  ಮೂರು ಚೈನ್, ಎರಡು ಬಳೆ, ಉಂಗುರ ಸೇರಿ ಮೂರು ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳುವು ಮಾಡಿರುವುದು ಗೊತ್ತಾಗಿದೆ.

ಈ ಸಂಬಂಧ ಕುಟುಂಬಸ್ಥರನ್ನ ವಿಚಾರಿಸಿ ಮಹಿಳೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ. 

Leave a Reply

Your email address will not be published. Required fields are marked *

Exit mobile version