ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ನಲ್ಲಿ ಬಸ್ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ.
ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ.
ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್ ಸ್ಟ್ಯಾಂಡ್ನಲ್ಲಿ ಬಸ್ ಹತ್ತಲು ಪ್ಲ್ಯಾಟ್ ಫಾರಂ ನಂಬರ್ 10 ರಲ್ಲಿ ಬಸ್ ಗಾಗಿ ಕಾಯುತ್ತಿದ್ದಾರೆ. ಸಮಯ ಸುಮಾರು 03-30 ಗಂಟೆಯಾಗಿತ್ತು. ಬಳಿಕ ಶಿರಾಳಕೊಪ್ಪ-ಶಿರಸಿ ರೂಟ್ ನ ಬಸ್ ಬಂದಿದೆ. ಬಸ್ ಹತ್ತಿ ಟಿಕೆಟ್ ಮಾಡಿಸಲು ಹೊರಟಾಗ ವ್ಯಾನಿಟಿ ಬ್ಯಾಗ್ ಜಿಪ್ ಓಪನ್ ಆಗಿರುವುದು ಕಂಡು ಬಂದಿದೆ. ಅನುಮಾನ ಬಂದು ನೋಡಿದಾಗ, ಮೂರು ಚೈನ್, ಎರಡು ಬಳೆ, ಉಂಗುರ ಸೇರಿ ಮೂರು ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳುವು ಮಾಡಿರುವುದು ಗೊತ್ತಾಗಿದೆ.
ಈ ಸಂಬಂಧ ಕುಟುಂಬಸ್ಥರನ್ನ ವಿಚಾರಿಸಿ ಮಹಿಳೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…