ತೀರ್ಥಹಳ್ಳಿ: ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತೀರ್ಥಹಳ್ಳಿಯಲ್ಲಿ ಹೃದಯಾಘಾತವಾದ ಘಟನೆ ನಡೆದಿದ್ದು ಆತನನ್ನು ಬದುಕಿಸಲು ತೀರ್ಥಹಳ್ಳಿಗರು ಹೋರಾಟ ನಡೆಸಿದ್ದಾರೆ.
ಶುಕ್ರವಾರ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ ಹೊತ್ತಿಗೆ ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನ ಗಮನಿಸಿದ ಕಂಡಕ್ಟರ್, ಡ್ರೈವರ್ಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಚಾಲಕ ಬಸ್ನ್ನ ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾನೆ. ಸಮಯಕ್ಕೆ ಸರಿಯಾಗಿ ಬಸ್ನ್ನ ಆಸ್ಪತ್ರೆಗೆ ಚಲಾಯಿಸಿದ ಡ್ರೈವರ್ ಹಾಗೂ ಕಂಡಕ್ಟರ್, ಅಲ್ಲಿ ಪ್ರಯಾಣಿಕನನ್ನ ದಾಖಲಿಸಿ, ಮುಂದಕ್ಕೆ ಹೋಗಿದ್ದಾರೆ.
ಆ್ಯಂಬುಲೆನ್ಸ್ ಡ್ರೈವರ್ಗಳ ಮಾನವೀಯತೆ:
ಇನ್ನೂ ಹೃದಯಾಘಾತಕ್ಕೊಳಗಾದ ಪ್ರಯಾಣಿಕನ ಪರಿಸ್ಥಿತಿ ಗಂಭೀರವಾಗಿತ್ತು. ಪ್ರಾಥಮಿಕ ಚಿಕಿತ್ಸೆ ನೀಡಿದರೂ ಸಹ, ತುರ್ತಾಗಿ ಹೆಚ್ಚಿನ ಟೆಂಟ್ ಒದಗಿಸುವ ಅಗತ್ಯವಿತ್ತು. ಆಗ ಅಲ್ಲಿದ್ದ ಆಂಬುಲೆನ್ಸ್ ಡ್ರೈವರ್ ರಂಜಿತ್, ರಹಮತ್, ಪವನ್ರವರು ಪ್ರಯಾಣಿಕನನ್ನು ಶಿವಮೊಗ್ಗದ ಆಸ್ಪತ್ರೆಗೆ ಶಿಫ್ಟ್ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ, ಕೆಲವೇ ಹೊತ್ತಿನಲ್ಲಿ ಶಿವಮೊಗ್ಗದ ಆಸ್ಪತ್ರೆಯೊಂದಕ್ಕೆ ಪ್ರಯಾಣಿಕನನ್ನ ಶಿಫ್ಟ್ ಮಾಡಿ, ಆತನಿಗೆ ಸಿಗಬೇಕಿದ್ದ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ.
ಕೊನೆಗೂ ಉಳಿಯಿತು ಜೀವ
ಸದ್ಯ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಯಲ್ಲಿದ್ದಾರೆ. ಅವರು ಯಾರು? ಎಲ್ಲಿಯವರು ? ಎಂದು ಹೇಳುವ ಸ್ಥಿತಿಯಲ್ಲಿ ಅವರು ಇರಲಿಲ್ಲ. ಬಸ್ನಲ್ಲಿ ಅವರ ಜೊತೆ ಯಾರು ಪ್ರಯಾಣಿಸುತ್ತಿರಲಿಲ್ಲ? ಡ್ರೈವರ್, ಕಂಡಕ್ಟರ್, ಜೆಸಿ ಆಸ್ಪತ್ರೆಯ ಸಿಬ್ಬಂದಿ, ಆ್ಯಂಬುಲೆನ್ಸ್ ಡ್ರೈವರ್ ಹೀಗೆ ಎಲ್ಲರೂ ಸಹ ಹಾರ್ಟ್ ಅಟ್ಯಾಕ್ ತುತ್ತಾದ ವ್ಯಕ್ತಿಯ ಪೂರ್ವಪರ ಕೇಳುವ ಗೋಜಿಗೂ ಹೋಗಲಿಲ್ಲ. ಬದಲಾಗಿ ಹೇಗಾದರೂ ಸರಿಯೇ ಜೀವ ಉಳಿಸಬೇಕು ಎಂದು ಪ್ರಯತ್ನ ಪಟ್ಟರು. ಅದರ ಫಲವಾಗಿ ಪ್ರಯಾಣಿಕನ ಜೀವ ಉಳಿದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್