ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿ ಗೌತಮ್ (21) ಎಂದು ಗುರುತಿಸಲಾಗಿದೆ.
ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ನಡೆದಿದ್ದೇನು???
ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಗರದ ಶುಭಮಂಗಳದ ಬಳಿಯಲ್ಲಿ ಗೌತಮ್ ತಮ್ಮ ಮನೆಗೆ ಹೋಗುತ್ತಿದ್ದ. ಈ ವೇಳೆ ಚಾಲುಕ್ಯ ಬಾರ್ ಸಮೀಪದ ಪುಟ್ಪಾತ್ ನಲ್ಲಿ, ಆತನ ಬೈಕ್ ಸ್ಕಿಡ್ ಆಗಿದೆ. ಪರಿಣಾಮ ಕೆಳಕ್ಕೆ ಬಿದ್ದ ಗೌತಮ್ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ಧಾನೆ..
ಮೃತ ಗೌತಮ್ ಶಿವಮೊಗ್ಗದ ನ್ಯಾಯಾದೀಶರೊಬ್ಬರ ಮಗ ಎಂಬುದು ತಿಳಿದುಬಂದಿದ್ದು, ಕಾಶೀಪುರದಲ್ಲಿ ಅವರ ನಿವಾಸವಿದ್ದು, ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನೂ ವಿದ್ಯಾರ್ಥಿಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದು, ಶವಾಗಾರದ ಬಳಿಯಲ್ಲಿ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…