ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ನೂರರ ಗಡಿ ದಾಟಿದೆ. ಈಗ ಪೆಟ್ರೋಲ್ ಬಂಕ್ ಮೇಲೆ ಬಿಜೆಪಿಯವರು ಕಲ್ಲು ಹೊಡಿತಾರಾ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ.
ಶಿವಮೊಗ್ಗ ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ಸರ್ಕಾರ ಹೋಗಿದೆ.ಕಾಂಗ್ರೆಸ್ ಸರ್ಕಾರ ಬಂದಿದೆ.ಹಾಗಾಗಿ ಬಿಜೆಪಿಯವರು ಹತಾಶರಾಗಿದ್ದಾರೆ ಎಂದು ಹೇಳಿದರು.
ಬಿಜೆಪಿಯವರು ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ರಲ್ಲಾ, ನಾವು ಕಲ್ಲೂ ತೂರಾಟ ಮಾಡಿಲ್ಲ. ಹೋರಾಟಾನು ಮಾಡಿಲ್ಲ ಎಂದ ಅವರು,ಈಗ ಪೆಟ್ರೋಲ್- ಡಿಸೇಲ್ ಎಷ್ಟು ಅಗಿದೆ.ಅದಕ್ಕೆ ಕಲ್ಲು ಹೊಡಿತ್ತಾರಾ.ನಾಚಿಗೆ ಅಗ್ಬೇಕು ಅವರಿಗೆ.ಅವರ ಸರ್ಕಾರ ಇದ್ದಾಗ ಏನು ಮಾಡಲಿಲ್ಲ.ಎಲ್ಲಾವಸ್ತುಗಳ ಬೆಲೆ ಜಾಸ್ತಿ ಮಾಡಿಕೊಂಡು ಬಂದ್ರು. ಮಾನ- ಮರ್ಯಾದೆ ಇದಿಯಾ ಅವರಿಗೆ ಎಂದು ವಾಗ್ದಾಳಿ ನಡೆಸಿದರು.
ವಿರೋಧ ಪಕ್ಷವಾಗಿ ಹೋರಾಟ ಮಾಡೋಕೆ ಅವಕಾಶ ಇದೆ. ಆದರೆ, ಕಲ್ಲು ಹೊಡಿಯೋದು ತಪ್ಪು. ಅಂತವರನೆಲ್ಲಾ ಅರೆಸ್ಟ್ ಮಾಡಿ, ಜೈಲಿಗೆ ಕಳುಹಿಸಬೇಕು.ಪ್ರತಿಭಟನೆಯ ನೇತೃತ್ವ ವಹಿಸಿದವರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.
ಬಿಜೆಪಿಯಬತು ಬೆಲೆ ಏರಿಕೆ ಮಾಡಿದಾಗ ನಾವು ಹೋರಾಟ ಮಾಡಿದ್ವೀ, ಅದ್ರೇ ನಾವು ಎಲ್ಲೂ ಕಲ್ಲು ಹೊಡೆದಿಲ್ಲ.ಮೋದಿ ಜೀ ಬಂದರೂ, ರಾಜ್ಯದಲ್ಲಿ ಇಷ್ಟು ಹೀನಾಯವಾಗಿ ಸೋತಿದ್ದಾರೆ..ಬಿಜೆಪಿಯವರು ಹತಾಶರಾಗಿ ಹೀಗೆಲ್ಲಾ ಮಾಡ್ತಾ ಇದ್ದಾರೆ ಎಂದು ಟೀಕಿಸಿದರು.
ಲೋಕಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು,ಲೋಕಸಭೆಯಲ್ಲಿ ಹೆಚ್ಚು ಸ್ಥಾನ ತಗೋಬೇಕು ಎಂಬ ಇರಾದೆಯಿದೆ. ಬಿಜೆಪಿ ಆಡಳಿತ ದುರ್ಬಲ ಅಗುತ್ತಿದೆ. ಒಳ್ಳೆಯ ಅಭ್ಯರ್ಥಿ ಹಾಕಿದರೆ ಈ ಬಾರಿ ಗೆಲ್ತೇವೆ. ಶೀಘ್ರದಲ್ಲೇ ಚುನಾವಣಾ ಕಾವು ಶುರುವಾಗುತ್ತೆ.ಅದಕ್ಕೂ ಮೊದಲು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಗೆ ಒತ್ತು ಕೊಡುತ್ತೇವೆ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್