ಹೊಸನಗರ : ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ಹೊಸನಗರದ ಸರ್ಕಲ್ ಇನ್ಸ್ಪೆಕ್ಟರ್ ಗಿರೀಶ್ರವರು ಹೇಳಿದರು.
ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಹೊಸನಗರ ಪೊಲೀಸ್ ಇಲಾಖೆ ಮತ್ತು ಆಶಾ ಜ್ಯೋತಿ ಪ್ರೇರಿತ ರಕ್ತನಿಧಿ ಕೇಂದ್ರ ಶಿವಮೊಗ್ಗ ಇವರ ಆಶ್ರಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ರಕ್ತದಾನ ಶಿಬಿರಾವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಗಿರೀಶ್ರವರು ರಕ್ತದಾನ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ರಕ್ತಕ್ಕೆ ಯಾವುದೇ ಜಾತಿಯಿಲ್ಲ. ರಕ್ತದಾನ ಮಾಡುವುದರ ಮೂಲಕ ಸಕಾಲ ಮಾನವರನ್ನು ರಕ್ತದಾನದ ಕೊರತೆಯಲ್ಲಿರುವವರನ್ನು ಉಳಿಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ವರ್ಷಕ್ಕೆ ಎರಡು ಬಾರಿಯಾದರೂ ರಕ್ತದಾನ ಮಾಡುವುದರಿಂದ ನಮ್ಮ ಜೀವಕ್ಕೂ ಯಾವುದೇ ಹಾನಿಯಿಲ್ಲ ಪ್ರತಿಯೊಬ್ಬರು ರಕ್ತದಾನ ಮಾಡಿ ಕಷ್ಟದಲ್ಲಿರುವ ಜನರ ಜೀವವನ್ನು ಉಳಿಸಬೇಕೆಂದರು.
ಹೊಸನಗರ ಪೊಲೀಸ್ ಠಾಣೆಯ ಹೆಡ್ ಕಾಸ್ಟೇಬಲ್ ಹಾಲೇಶ್ಪಪ್ಪನವರು ಇಲ್ಲಿಯವರೆಗೆ 38 ಬಾರಿ ರಕ್ತದಾನ ಮಾಡುವುದರ ಮೂಲಕ ಪೊಲೀಸ್ ಇಲಾಖೆಗೆ ಸಾಕಷ್ಟು ಗೌರವ ತಂದಿದ್ದಾರೆ ಇವರು ಯಾವುದೇ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರಲಿ ಆ ಭಾಗದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಿ ಆ ತಾಲ್ಲೂಕಿನಲ್ಲಿ ಯಾರಿಗೆ ರಕ್ತದಾನದ ಕೊರತೆ ಕಂಡು ಬಂದರೂ ಅವರಿಗೆ ರಕ್ತ ನೀಡುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು ಇವರ ಕಾರ್ಯ ಶ್ಲಾಘನೀಯ. ಇಂತವರು ನಮ್ಮ ಪೊಲೀಸ್ ಇಲಾಖೆಯಲ್ಲಿರುವುದೇ ನಮಗೆ ಹೆಮ್ಮೆ ಇವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರು ನಡೆಯಬೇಕೆಂದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಆಶಾ ಜ್ಯೋತಿ ರಕ್ತನಿಧಿ ಪ್ರೇರಿತ ಕೇಂದ್ರದ ಮುಖ್ಯ ವೈದ್ಯಾಧಿಕಾರಿಯಾದ ಡಾ|| ಎಂ.ಸಿ ಹುಲಿಮನಿ, ಆಶಾ ಜ್ಯೋತಿ ಪ್ರಯೋಗ ತಂತ್ರಜ್ಞರಾದ ಸ್ವಾಮಿ, ಆಶಾ ಜ್ಯೋತಿ ಪ್ರಯೋಗ ತ್ರಂತ್ರಜ್ಞ ಆಸ್ಮಾ, ಪಿ.ಆರ್.ಓ ರವಿಕುಮಾರ್, ಪ್ರಯೋಗ ತಂತ್ರಜ್ಞೆ ಸಂಧ್ಯಾ, ಪ್ರಯೋಗ ತಂತ್ರಜ್ಞ ಚಂದ್ರಶೇಖರ್ ಪೊಲೀಸ್ ಇಲಾಖೆಯ ಸರ್ಕಲ್ ಇನ್ಸ್ಪೆಕ್ಟರ್ ಗಿರೀಶ್, ಸಬ್ ಇನ್ಸ್ಪೆಕ್ಟರ್ ನೀರರಾಜ್ ನರಲಾರ, ಹೆಡ್ ಕಾಸ್ಟೇಬಲ್ ಹಾಲೇಶ್, ಆಲ್ಪದ್, ಎ.ಎಸ್.ಐ ಸತೀಶ ಗೌಡ, ತೀಥೇಶ್, ಪ್ರದೀಪ್, ಸುರೇಶ್, ಸಂದೀಪ, ಖರೇಷಿಯ ಗಂಗಪ್ಪ, ಸಂತೋಷ್ ನಾಯ್ಕ್, ಗೋಪಾಲಕೃಷ್ಣ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್