ರಿಪ್ಪನ್ಪೇಟೆ : 16-06-2023 ರಂದು ವಾಟ್ಸಪ್ ಗ್ರೂಫ್ಗಳಲ್ಲಿ ತೀರ್ಥಹಳ್ಳಿಯ ಪ್ರತಿಷ್ಠಿತ ಕಾಲೇಜು ಯುವತಿಯರ ಅಶ್ಲೀಲ ನಗ್ನ ಚಿತ್ರಗಳನ್ನು ಹರಿಬಿಡಲಾಗಿದ್ದು, ವಿಡಿಯೋದಲ್ಲಿ ABVP ವಿದ್ಯಾರ್ಥಿ ಸಂಘಟನೆಯ ತೀರ್ಥಹಳ್ಳಿ ಘಟಕದ ಅಧ್ಯಕ್ಷನೂ ಕೂಡ ಇದ್ದು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆತನ ವಿರುದ್ಧ ಕಾನೂನು ಕಠಿಣ ಕ್ರಮ ಜರುಗಿಸುವಂತೆ ರಿಪ್ಪನ್ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ನಾಡ ಕಛೇರಿಯಲ್ಲಿ ಉಪ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಸಂಘಟನೆಗೆ ಸದಸ್ಯತ್ವ ಆಮಿಷ ತೋರಿಸಿ, ವೀಡಿಯೋ ಮಾಡಿ ದೇಹದ ನಗ್ನ ದೃಶ್ಯಗಳನ್ನು ಅಶ್ಲೀಲವಾಗಿ ಚಿತ್ರಿಸಿ ವೈರಲ್ ಮಾಡುವ ಬೆದರಿಕೆ ಒಡ್ಡಿ ಬ್ಲಾಕ್ಮೇಲ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ
ಕಂಡುಬಂದಿದೆ. ಇದೊಂದು ಸಮಾಜ ತಲೆತಗ್ಗಿಸುವ ಪ್ರಕರಣವಾಗಿದ್ದು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹ ಮಾಡಲಾಯಿತು.
ಈ ರೀತಿಯ ಪ್ರಕರಣ ಮುಂದುವರೆದರೆ ಮರ್ಯಾದಸ್ಥ ಕುಟುಂಬದ ಹೆಣ್ಣುಮಕ್ಕಳು ಶಾಲಾ ಕಾಲೇಜುಗಳಿಗೆ ಬರುವುದು ಕಷ್ಟ ಸಾಧ್ಯವಾಗಲಿದ್ದು ಪೋಲೀಸ್ ಇಲಾಖೆ ಪ್ರಭಾವಿಗಳ ಪ್ರಭಾವಕ್ಕೆ ಮಣಿಯದೇ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ಕೋರಿಕೊಳ್ಳುತ್ತೇವೆ ಎಂದು ಮನವಿ ಸಲ್ಲಿಸಿದ್ದಾರೆ.
ಈ ಸಂಧರ್ಭದಲ್ಲಿ ಮುಖಂಡರಾದ ಈಶ್ವರಪ್ಪ ಗೌಡ ಹೆಚ್ ವಿ , ಆಸೀಫ಼್ ಭಾಷಾಸಾಬ್ ,ಮಧುಸೂಧನ್ ,ಮಹೇಂದ್ರ ಬುಕ್ಕಿವರೆ ,ಗಣಪತಿ ,ರವಿ ,ಶ್ರೀಧರ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್