ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ
ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ
ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು.
ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು.
ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು
ಸರ್ಕಾರ ಹೆಚ್ಚು ಚಿಂತನೆ ನಡೆಸಬೇಕಿದೆ. ನೈತಿಕ ಮೌಲ್ಯಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಬೇಕಿದೆ. ಚಾರಿತ್ಯ ರಹಿತ ವಿದ್ಯೆ ನಿರುಪಯುಕ್ತವಾದದು.
ಶಿವಮೊಗ್ಗ ಜಿಲ್ಲೆಯಿಂದ ದೇಶಕ್ಕಾಗಿ ತನುಮನ ಧನ ನೀಡಿದ ಸೈನಿಕರು ಹೆಚ್ಚು. ಅಂತಹ ರಾಷ್ಟ್ರಪ್ರೇಮವೇ ಎನ್ಇಎಸ್ ಸಂಸ್ಥೆಯಂತಹ ಸಮೂಹ ಮೂಡಿಬರಲು ಕಾರಣ. ಲಕ್ಷಾಂತರ ವಿದ್ಯಾರ್ಥಿಗಳ ನಡುವೆ ಎನ್ಇಎಸ್ ವಿದ್ಯಾರ್ಥಿಗಳು ವಿಶೇಷವಾಗಿ ಗುರುತಿಸಿಕೊಳ್ಳಬಲ್ಲರು.
ದೇಶವನ್ನು ಒಟ್ಟುಗೂಡಿಸುವ ರಾಷ್ಟ್ರೀಯತೆ ಶುರುವಾದದ್ದೆ 1948 ರ ನಂತರ. ಅದರೇ 1946 ರಲ್ಲಿಯೇ ರಾಷ್ಟ್ರೀಯ ಶಿಕ್ಷಣ ಸಮಿತಿ ಎಂಬ ಸಂಸ್ಥೆಯ ಮೂಲಕ ರಾಷ್ಟ್ರೀಯತೆಯ ಪರಿಕಲ್ಪನೆಯನ್ನ ಮೆರೆದದ್ದು ಅದ್ಭುತ.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಮಾನವೀಯ ಮೌಲ್ಯಗಳೊಂದಿಗೆ ಎನ್ಇಎಸ್ ಅಮೃತ ವರ್ಷ ಯಶಸ್ವಿಯಾಗಿ ಮೂಡಿದೆ. ಗ್ರಾಮೀಣದ ಭಾಗದಲ್ಲಿ ಶೈಕ್ಷಣಿಕ ಶ್ರೇಷ್ಟತೆ ನೀಡುವಲ್ಲಿ ಎನ್ಇಎಸ್ ಸಂಸ್ಥೆ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ.
ಕಾರ್ಯಕ್ರಮದಲ್ಲಿ ಎನ್ಇಎಸ್ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ.ನಾರಾಯಣರಾವ್, ಎಂ.ಆರ್.ಸೀತಾಲಕ್ಷ್ಮೀ, ಎಂ.ಜಿ.ರಾಮಚಂದ್ರಮೂರ್ತಿ, ಡಿ.ಎಸ್.ಅರುಣ್, ಅನಂತದತ್ತಾ, ಮಧುರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಎನ್ಇಎಸ್ ನೂತನ ಕೈಪಿಡಿ ಹಾಗೂ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಮನಸೆಳೆದ ಮೆರವಣಿಗೆಯ ಕಲಾತಂಡಗಳು :
ಬೆಳಗ್ಗೆ ಎನ್ಇಎಸ್ ಕಛೇರಿ ಮುಂಭಾಗದ ಎಸ್.ಆರ್.ನಾಗಪ್ಪಶೆಟ್ಟಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದ ನಂತರ ಪ್ರಾರಂಭವಾದ ಮೆರವಣಿಗೆಯಲ್ಲಿ ವೀರೇಂದ್ರ ಹೆಗ್ಗಡೆ ಹಾಗೂ ಎನ್ಇಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅವರು ಕುಳಿತ ಸಾರೋಟು ಕಂಗೊಳಿಸಿತು. ಮೆರವಣಿಗೆಯಲ್ಲಿ ಮಕ್ಕಳಿಂದ ವಿವಿಧ ಕಲಾಪ್ರಕಾರಗಳು ಅನಾವರಗೊಂಡಿತು. ಕೀಲುಕುದುರೆ, ಲಂಬಾಣಿ ನೃತ್ಯ, ಕಂಸಾಳೆ, ತಟ್ಟಿರಾಯ ಗೊಂಬೆಗಳು ನೋಡುಗರ ಮನಸೆಳೆಯಿತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್