ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ.

ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ.




ಹೌದು, ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಸಂತ್ರಸ್ತರ ಪುನರ್​ ವಸತಿಗೆ ಮೀಸಲಿಟ್ಟಿರುವ ಅರಣ್ಯ ಭೂಮಿ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಸರ್ವೆ ನಂಬರ್​​ಗಳಲ್ಲಿದೆ.

ಈ ಅರಣ್ಯ ಭೂಮಿಯ ಬಗ್ಗೆ ಇಂಡಿಯನ್​ ಎಕ್ಸ್​​ಪ್ರೆಸ್​​​ ಡಾಟ್ ​ಕಮ್​​ ವರದಿಯಲ್ಲಿ, ಮೇ2 ರ ಸಚಿವಾಲಯದ ಪತ್ರದಂತೆ 2000 ಮತ್ತು 2004ರಲ್ಲಿ ಸುಪ್ರೀಂ ಕೋರ್ಟ್​​ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ವರದಿಯಾಗಿದೆ.

ಫೆಬ್ರವರಿಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಬಿಡುಗಡೆಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿ ಹೊಸ ಪ್ರಸ್ತಾವನೆ ಸಲ್ಲಿಸಲು ತೀರ್ಮಾನ ಮಾಡಲಾಗಿತ್ತು.

ಯೋಜನೆಯಿಂದ ನಿರಾಶ್ರಿತರಾದ 11,000 ರಿಂದ 12,000 ಕುಟುಂಬಗಳ ಪರವಾಗಿ ಸುಮಾರು 9,600 ಎಕರೆ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಮತ್ತು ದಶಕಗಳ ಹಿಂದೆ ಪುನರ್ವಸತಿ ಕಲ್ಪಿಸಲು ತಯಾರಿಸಿದ ಮನವಿಯೊಂದನ್ನು ರಾಜ್ಯ ಸರ್ಕಾರದ ಉನ್ನತ ಮಟ್ಟದ ಸಮಿತಿ ಮುಂದಾಗಿತ್ತು.

ಇದರಂತೆ ಮಾರ್ಚ್ 23 ರಂದು ಕರ್ನಾಟಕ ಸರ್ಕಾರ 9,129 ಎಕರೆ ಅರಣ್ಯ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲು ಅವಕಾಶ ನೀಡುವಂತೆ ಕೇಂದ್ರ ಪರಿಸರ ಸಚಿವಾಲಯಕ್ಕೆ ಮನವಿ ಮಾಡಿತ್ತು.

ಶರವಾತಿ ಸಂತ್ರಸ್ತರಿಗೆ ಪುನರ್ವಸತಿಗಾಗಿ ಈ ಹಿಂದೆ ಜಮೀನುಗಳನ್ನು ಬಿಡುಗಡೆ ಮಾಡಲಾಗಿದ್ದರೂ, ಜಮೀನುಗಳ ಕಾನೂನಿ ಅಡಿಯಲ್ಲಿ ಮೀಸಲು ಅರಣ್ಯ ಪ್ರದೇಶವಾಗಿಯೇ ಉಳಿದುಕೊಂಡಿದೆ.




ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವಾಲಯಕ್ಕೆ ಪತ್ರ ಬರೆದಿರುವ ರಾಜ್ಯ ಸರ್ಕಾರ, ಮೀಸಲು ಅರಣ್ಯ ಪ್ರದೇಶವಾಗಿಯೇ ಉಳಿದುಕೊಂಡಿದ್ದು, ಈ ಪ್ರದೇಶಗಳಲ್ಲಿ ನೆಲೆಸಿರುವ ಜನರು ವಿವಿಧ ಸರ್ಕಾರಿ ಸವಲತ್ತು ಪಡೆದುಕೊಳ್ಳಲು ವಂಚಿತರಾಗಿದ್ದಾರೆ ಎಂದು ತಿಳಿಸಿತ್ತು. ಅಲ್ಲದೇ, ರಾಜ್ಯ ಸರ್ಕಾರ ಕೇಂದ್ರದ ಅನುಮತಿ ಪಡೆದುಕೊಳ್ಳದೇ ಡಿನೋಟಿಫಿಕೇಶನ್​​ ಹೊರಡಿಸಿದ್ದ ಕಾರಣ 2021ರ ಮಾರ್ಚ್​​ 4ರಂದು ಸರ್ಕಾರಿ ಅಧಿಸೂಚನೆಯನ್ನು ರದ್ದುಗೊಳಿಸಿತ್ತು.

ಶರಾವತಿ ಕಣಿವೆಯ ಜಲವಿದ್ಯುತ್ ಯೋಜನೆಯೂ 1964ರಲ್ಲಿ ಕಾರ್ಯಾರಂಭ ಮಾಡಿತ್ತು. 1977ರಲ್ಲಿ ಯೋಜನೆ ಕೊನೆಗೊಂಡಿತು.

ಈ ಯೋಜನೆಯು ನೂರಾರು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿತ್ತು. ಆಗಿನಿಂದ ಉಳುಮೆ ಜಾಗದ ಭೂ ಹಕ್ಕು ನೀಡುವಂತೆ ಸಂತ್ರಸ್ತರು 6 ದಶಕದ ಹೋರಾಟ ಇನ್ನು ಫಲ ಸಿಕ್ಕಿಲ್ಲ…





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

11 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

11 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

11 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

16 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

18 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago