ಶಿವಮೊಗ್ಗದ ಇಂಜಿನಿಯರ್ ಪತ್ನಿಯ ಕೊಲೆ!!! – ನಡೆದಿದ್ದೇನು…!!???

ಶಿವಮೊಗ್ಗ ನಗರದ ವಿಜಯನಗರದಲ್ಲಿ ಮಹಿಳೆಯ ಕೊಲೆ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಕಾರು ಚಾಲಕನ ನಡೆ ಬಗ್ಗೆ ತುಂಗಾನಗರ ಪೊಲೀಸರು ಅನುಮಾನ ಮೂಡಿಸಿದೆಯಷ್ಟೆ ಅಲ್ಲದೆ , ಮನೆ ಸಮೀಪ ಕೆಲ ವ್ಯಕ್ತಿಗಳು ಓಡಾಡಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ.

ತುಂಗಾನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ವಿಜಯ ನಗರದ 2 ನೇ ತಿರುವಿನಲ್ಲಿರುವ ಮನೆಯಲ್ಲಿ   ಕಮಲಮ್ಮ 54 ವರ್ಷದ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕೊಲೆಯಾದವರು,  ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿರುವ ಮಲ್ಲಿಕಾರ್ಜುನರವರ ಪತ್ನಿ ಯಾಗಿದ್ದಾರೆ.

ಮಲ್ಲಿಕಾರ್ಜುನ್​ರವರು ಕೆಲದಿನಗಳಲ್ಲಿ ನಿವೃತ್ತಿಯಾಗುವವರಿದ್ದು. ಈ ಹಿನ್ನೆಲೆಯಲ್ಲಿ  ಸ್ನೇಹಿತರೊಂದಿಗೆ  ಗೋವಾಕ್ಕೆ ತೆರಳಿದ್ರು. ಇನ್ನೂ ಕಮಲಮ್ಮರವರ   ಮಗ ಬೆಂಗಳೂರಿನಲ್ಲಿ MBBS ಮುಗಿಸಿ MD ಮಾಡುತ್ತಿದ್ದರು. ಮಗಳು ಇಂಜಿನಿಯರಿಂಗ್ ಮುಗಿಸಿ ಹೊರ ಊರಿನಲ್ಲಿದ್ದರು.  ಹಾಗಾಗಿ ಮನೆಯಲ್ಲಿ ಕಮಲಮ್ಮ ಒಬ್ಬರೆ ಇದ್ದರು. ನಿನ್ನೆ ಸಂಜೆ ಅವರ ಹತ್ಯೆಯಾಗಿದೆ.

ನಿನ್ನೆ ಶನಿವಾರ ಸಂಜೆ ಮಲ್ಲಿಕಾರ್ಜುನಯ್ಯ ಅವರು ಮಡದಿ ಕಮಲಮ್ಮ ನವರಿಗೆ  5:30ರ ಸಮಯದಲ್ಲಿ ಫೋನ್ ಮಾಡಿದ್ದಾರೆ. ಆದರೆ ಕಮಲಮ್ಮ ಫೋನ್​ ರಿಸೀವ್ ಆಗಿ್ಲ.  ಹಲವು ಸಾರಿ ಟ್ರೈ ಮಾಡಿದ್ದಾರೆ.  ಇದರಿಂದ ಆತಂಕಗೊಂಡ ಅವರು, ತಮ್ಮ  ಸ್ನೇಹಿತನಿಗೆ ಕರೆ ಮಾಡಿ ವಿಚಾರಿಸುವಂತೆ ತಿಳಿಸಿದ್ದಾರೆ. ಮಲ್ಲಿಕಾರ್ಜುನ್​ರವರ ಸ್ನೇಹಿತರು ಮನೆಗೆ ಹೋಗಿ ನೋಡಿದಾಗ, ಅಲ್ಲಿ ಬಾಗಿಲು ತೆರಳಿದ ಸ್ಥಿತಿಯಲ್ಲಿತ್ತು. ಅಲ್ಲದೆ ಲೈಟ್ ಆನ್ ಆಗಿರಲಿಲ್ಲ. ಮೊಬೈಲ್ ಟಾರ್ಚ್​ ಬಳಸಿ ಒಳಕ್ಕೆ ಹೋಗಿ ನೋಡಿದಾಗ ಕಮಲಮ್ಮರವರ ಮೃತದೇಹ ಕಂಡಿದೆ. ತಕ್ಷಣವೇ ಅವರು, ಮಲ್ಲಿಕಾರ್ಜುನ್​ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನೂ ಘಟನೆಯ ಬಗ್ಗೆ ಸ್ಥಳಿಯರು ಪೊಲೀಸರ ಬಳಿಯಲ್ಲಿ  ಅನುಮಾನ ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ ಕಾರು ಚಾಲಕ ಘಟನೆಯ ಹಿಂದಿನ ದಿನ ಕಮಲಮ್ಮರ ಬಳಿ ಬಂದು ಹಣ ಕೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆ ವೇಳೆ ನಡೆದಿದ್ದೇನು ಎಂಬುದು ಸ್ಪಷ್ಟವಾಗಿಲ್ಲ. ಇನ್ನೂ ಕಾರು ಚಾಲಕನ ಮೊಬೈಲ್ ಸಹ ಸ್ವಿಚ್ ಆಫ್ ಆಗಿರುವುದು ಪೊಲೀಸರು ಪ್ರಕರಣದಲ್ಲಿ ಒನ್ ಆಫ್​ ದಿ ಸಸ್ಪೆಕ್ಟ್ ಎನ್ನುತ್ತಿದ್ದಾರೆ.

ಇನ್ನೂ ಘಟನೆ ನಡೆದ ದಿನ ಕಮಲಮ್ಮರ  ಮನೆಯ ಬಳಿಯಲ್ಲಿ ನಾಲ್ಕೈದು ಮಂದಿ ಅನುಮಾನಸ್ಪದವಾಗಿ ಓಡಾಡುತ್ತಿರುವುದನ್ನ ಕೆಲವರು ಕಂಡಿದ್ದಾರೆ. ಈ ಬಗ್ಗೆಯು ಪೊಲೀಸರು ತನಿಖೆ ನಡೆಸ್ತಿದ್ದಾರೆ.

ಇನ್ನೊಂದೆಡೆ ಒಬ್ಬರೇ ಈ ಕೃತ್ಯವೆಸಗಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬರುತ್ತಿದ್ದು, ಕಮಲಮ್ಮರವರು ಸಾಕಷ್ಟು ಗಟ್ಟಿಮುಟ್ಟಾದ ಆಳಾಗಿದ್ದರು. ಅವರನ್ನ ನಾಲ್ಕೈದು ಜನರು ಸೇರಿಕೊಂಡು ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ದಾವಣಗೆರೆಯಿಂದ ಎಫ್​ಎಸ್​ಎಲ್​ ತಂಡ ಬರುತ್ತಿದ್ದು,ಘಟನೆ ಸಂಬಂಧ ತುಂಗಾನಗರ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಒಟ್ಟಾರೆ, ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡುತ್ತಿದ್ದು, ಮಹಿಳೆಯ ಕೊಲೆ ನಗರದಲ್ಲಿ ಒಂದು ರೀತಿಯ ಆತಂಕ ಮೂಡಿಸಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

15 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

16 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

21 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

2 days ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

2 days ago