ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ಕಶ ಶಬ್ದ ಮಾಡುವ ಹಾರನ್ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್ ವೆಹಿಕಲ್ ಕಾಯ್ದೆ ಅಡಿಯ ಪ್ರಕರಣ ದಾಖಲು ಮಾಡಲಾಗಿದೆ.
ಶಿವಮೊಗ್ಗ ಸಂಚಾರಿ ವೃತ್ತಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ವಾಪಸ್ ಆಗುತ್ತಿದ್ದಂತೆ ಸಾಲು ಸಾಲು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ಧಾರೆ. ಇದಕ್ಕೆ ಪೂರಕವಾಗಿ ನಿನ್ನೆ ಶಿವಮೊಗ್ಗ ನಗರದಲ್ಲಿ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್ (Shrill Horns) ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಕರ್ಕಶ ಹಾರ್ನ್ ಗಳನ್ನು ಅಳವಡಿಸಿದ್ದ ಒಟ್ಟು 39 ವಾಹನಗಳನ್ನು ವಶಕ್ಕೆ ಪಡೆದು, ವಾಹನ ಚಾಲಕರು / ಮಾಲೀಕರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ 39 ಪ್ರಕರಣಗಳನ್ನು ದಾಖಲಿಸಲಾಗಿದೆ.
ಇನ್ನೂ ಸೊರಬ ತಾಲ್ಲೂಕಿನಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರಾಜಶೇಖರ್ ನೇತೃತ್ವದಲ್ಲಿ ಆನವಟ್ಟಿಯ ಜೂನಿಯರ್ ಕಾಲೇಜು ಮತ್ತು ಬಸ್ ನಿಲ್ದಾಣದ ಬಳಿ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್ (Shrill Horns) ಗಳನ್ನು ಅಳವಡಿಸಿದ್ದ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.
ಅಲ್ಲದೆ ಚಾಲನಾ ಪರವಾನಿಗೆ ಇಲ್ಲದೇ, ಹೆಲ್ಮೆಟ್ ಧರಿಸದೇ ಮತ್ತು ಅತಿವೇಗ ಹಾಗೂ ಅಪಾಯಕಾರಿಯಾಗಿ ವಾಹನಗಳನ್ನು ಚಲಾಯಿಸುತ್ತಿದ್ದ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಲಾಯ್ತು.
ಈ ಕಾರ್ಯಾಚರಣೆಯಲ್ಲಿ ಒಟ್ಟು 60 ವಾಹನಗಳನ್ನು ವಶಕ್ಕೆ ಪಡೆದು, ವಾಹನ ಚಾಲಕರು / ಮಾಲೀಕರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ ಒಟ್ಟು 60 ಪ್ರಕರಣಗಳನ್ನು ದಾಖಲಿಸಲಾಗಿದೆ.
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…