ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 99 ವಾಹನಗಳು ಸೀಜ್ – ಕಾರಣವೇನು ಗೊತ್ತಾ???? ಈ ಸುದ್ದಿ ನೋಡಿ

ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ  ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್‌ ವೆಹಿಕಲ್‌ ಕಾಯ್ದೆ ಅಡಿಯ ಪ್ರಕರಣ ದಾಖಲು ಮಾಡಲಾಗಿದೆ.

ಶಿವಮೊಗ್ಗ ಸಂಚಾರಿ ವೃತ್ತಕ್ಕೆ ಸರ್ಕಲ್​ ಇನ್​ಸ್ಪೆಕ್ಟರ್ ಸಂತೋಷ್​ ಕುಮಾರ್ ವಾಪಸ್ ಆಗುತ್ತಿದ್ದಂತೆ ಸಾಲು ಸಾಲು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ಧಾರೆ. ಇದಕ್ಕೆ ಪೂರಕವಾಗಿ ನಿನ್ನೆ  ಶಿವಮೊಗ್ಗ ನಗರದಲ್ಲಿ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್  (Shrill Horns) ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಕರ್ಕಶ ಹಾರ್ನ್ ಗಳನ್ನು ಅಳವಡಿಸಿದ್ದ ಒಟ್ಟು 39 ವಾಹನಗಳನ್ನು ವಶಕ್ಕೆ ಪಡೆದು, ವಾಹನ ಚಾಲಕರು / ಮಾಲೀಕರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ 39 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇನ್ನೂ ಸೊರಬ ತಾಲ್ಲೂಕಿನಲ್ಲಿ ಸರ್ಕಲ್​ ಇನ್​ಸ್ಪೆಕ್ಟರ್​ ರಾಜಶೇಖರ್​ ನೇತೃತ್ವದಲ್ಲಿ ಆನವಟ್ಟಿಯ ಜೂನಿಯರ್ ಕಾಲೇಜು ಮತ್ತು ಬಸ್ ನಿಲ್ದಾಣದ ಬಳಿ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್ (Shrill Horns) ಗಳನ್ನು ಅಳವಡಿಸಿದ್ದ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.

ಅಲ್ಲದೆ  ಚಾಲನಾ ಪರವಾನಿಗೆ ಇಲ್ಲದೇ, ಹೆಲ್ಮೆಟ್ ಧರಿಸದೇ ಮತ್ತು ಅತಿವೇಗ ಹಾಗೂ ಅಪಾಯಕಾರಿಯಾಗಿ ವಾಹನಗಳನ್ನು ಚಲಾಯಿಸುತ್ತಿದ್ದ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಲಾಯ್ತು.

ಈ ಕಾರ್ಯಾಚರಣೆಯಲ್ಲಿ ಒಟ್ಟು 60 ವಾಹನಗಳನ್ನು ವಶಕ್ಕೆ ಪಡೆದು, ವಾಹನ ಚಾಲಕರು / ಮಾಲೀಕರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ ಒಟ್ಟು 60 ಪ್ರಕರಣಗಳನ್ನು ದಾಖಲಿಸಲಾಗಿದೆ. 

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

14 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

15 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

21 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

2 days ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

2 days ago