ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಸಂಸದ ಬಿವೈ ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್ ರಣತಂತ್ರ ರಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಚಿಂತನೆ ನಡೆಸಿದ್ದಾರೆ.
ಹಾಗಾಗಿ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ ಮೂಲಕ ಆಪರೇಷನ್ ಕಾಂಗ್ರೆಸ್ಗೆ ಮುಂದಾಗಿದೆಯಂತೆ. ಒಂದು ವೇಳೆ ಆಪರೇಷನ್ ಕಾಂಗ್ರೆಸ್ ಯಶಸ್ವಿಯಾದ್ರೆ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ.
ಹೌದು, ಕಾಗೋಡು ತಿಮ್ಮಪ್ಪ ಅವರ ಮೂಲಕ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಸಳೆಯುವ ಪ್ರಯತ್ನಕ್ಕೆ ಕಾಂಗ್ರೆಸ್ ಮುಂದಾಗಿದೆಯಂತೆ. ಸೊರಬ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿರುವ ಕುಮಾರ್ ಬಂಗಾರಪ್ಪ ಅವರನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ಕುಮಾರ್ ಬಂಗಾರಪ್ಪ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ್ರೆ ಶಿವಮೊಗ್ಗದಿಂದ ಸ್ಪರ್ಧಿಸಲು ಅವಕಾಶ ನೀಡುವ ಸಾಧ್ಯತೆಗಳಿವೆ. ಲೋಕಸಭಾ ಚುನಾವಣೆಯ ಟಿಕೆಟ್ ಆಫರ್ ನೀಡಿ ಕುಮಾರ ಬಂಗಾರಪ್ಪ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚೆಗಳು ನಡೆದಿವೆ ಎನ್ನಲಾಗುತ್ತಿವೆ.
ಶಿವಮೊಗ್ಗದಲ್ಲಿ ನಾಯಕತ್ವದ ಕೊರತೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ಗೆ ಕುಮಾರ್ ಬಂಗಾರಪ್ಪ ಅನಿವಾರ್ಯ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಸೊರಬ ಕ್ಷೇತ್ರದಲ್ಲಿ 45 ಸಾವಿರಕ್ಕೂ ಅಧಿಕ ಮತಗಳಿಂದ ಸೋತಿರುವ ಕುಮಾರ ಬಂಗಾರಪ್ಪ ಮುಂದಿನ ಐದು ವರ್ಷ ಕಾಯುವ ಅನಿವಾರ್ಯತೆವಿದೆ. ಆದ್ರಿಂದ ಕಾಂಗ್ರೆಸ್ ಆಫರ್ ಒಪ್ಪಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.
ಇನ್ನು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಂಗಾರಪ್ಪ ಕುಟುಂಬ ತನ್ನದೇ ಆದ ಜನಪ್ರಿಯತೆ ಹೊಂದಿದೆ. ಸೊರಬದಿಂದ ಗೆದ್ದಿರುವ ಮಧು ಬಂಗಾರಪ್ಪ ಸಿದ್ದರಾಮಯ್ಯ ಸಂಪುಟ ಸೇರಿಕೊಂಡಿದ್ದಾರೆ. ಒಂದು ವೇಳೆ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾದ್ರೆ ಶಿವಮೊಗ್ಗದಲ್ಲಿ ಸಹೋದರರಿಬ್ಬರು ಜೊತೆಯಾಗಿ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದು ಪ್ರಚಾರ ನಡೆಸಬಹುದು ಎಂಬುವುದು ಕೈ ನಾಯಕರ ಲೆಕ್ಕಾಚಾರವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್