ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ| ಉಚಿತವಾಗಿ ಓಡಾಡಲು ಇಲ್ಲಿ ಸರ್ಕಾರಿ ಬಸ್ಸುಗಳೇ ಇಲ್ಲಾ|congress guaranty

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ

ರಿಪ್ಪನಪೇಟೆ : ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಯಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೊಸನಗರ ತಾಲ್ಲೂಕಿನ ಮಹಿಳೆಯರಿಗೆ ಪ್ರೀ ಭಾಗ್ಯ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿದೆ…………!

ಶಿವಮೊಗ್ಗ-ತೀರ್ಥಹಳ್ಳಿ-ಹೊಸನಗರ- ಕುಂದಾಪುರ ಮಂಗಳೂರು-ಉಡುಪಿ ರಾಜ್ಯ ಹೆದ್ದಾರಿ ಸಂಪರ್ಕದ ಹಲವು ತಾಲ್ಲೂಕಿನ ಖಾಸಗಿ ಬಸ್‌ಗಳಿಂದಾಗಿ ಸರ್ಕಾರದ ಕೆಂಪು ಬಸ್ ಇಲ್ಲದೆ ರೈತ ಮಹಿಳೆಯರ ಮೂಗಿಗೆ ತುಪ್ಪಾ ಸವರಿದಂತಾಗಿ ಮಹಿಳೆಯರು ಸರ್ಕಾರದ ವಿರುದ್ದ ಹಿಡಿ ಶಾಪ ಹಾಕುವಂತಾಗಿ ಸುದ್ದಿಗೆ ಗ್ರಾಸವಾಗಿದೆ.

ಒಂದು ಎರಡು ಸರ್ಕಾರಿ ಬಸ್‌ಗಳು ಬೆಂಗಳೂರು ಮೈಸೂರು ಶಿವಮೊಗ್ಗ ಹೊಸನಗರ ಕುಂದಾಪುರ ಭಟ್ಕಳ ಮತ್ತು ಸಿಗಂದೂರು ಕೊಲ್ಲೂರು ಹೀಗೆ ಓಡಾಡುತ್ತಿದ್ದು ದುರ್ಗಾಂಬ ಶ್ರೀ ದುರ್ಗಾಂಬ ಮತ್ತು ಭಾಗ್ಯಲಕ್ಷಿö್ಮ,ರಾಜನಾಥ-ನವದುರ್ಗ,ಎಸ್.ಜಿ.ಎಂ.ಟಿ.ಕಂಪನಿ,ಹೀಗೆ ಹಲವು ಖಾಸಗಿ ಬಸ್ ಸಂಚರಿಸುತ್ತಿದ್ದು ಸರ್ಕಾರಿ ಬಸ್ ಇಲ್ಲದೆ ಇಲ್ಲಿನ ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿ ಸೌಲಭ್ಯದಿಂದ ವಂಚಿರನ್ನಾಗಿಸಿದೆ.

ರಾಜ್ಯ ಸರ್ಕಾರ ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಶಿವಮೊಗ್ಗ ಜಿಲ್ಲೆಯ ಹಲವು ತಾಲ್ಲೂಕ್ ಕೇಂದ್ರ ಮತ್ತು ಗ್ರಾಮಾಂತರ ಪ್ರದೇಶದ ರೈತ ಮಹಿಳೆಯರಿಗೆ ಬಸ್ ಸಂಚಾರದಲ್ಲಿ ವಂಚಿಸಿದಂತಾಗಿದ್ದು ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ಆಸಕ್ತಿ ವಹಿಸಿ ಶಿವಮೊಗ್ಗ ಜಿಲ್ಲೆ-ಉಡುಪಿ-ಮಂಗಳೂರು-ಚಿಕ್ಕಮಂಗಳೂರು-ಹಾವೇರಿ -ಜಿಲ್ಲೆಯ ಖಾಸಗಿ ಬಸ್ ಸಂಚಾರದಲ್ಲಿ ಮಹಿಳೆಯರಿಗೆ ಗ್ಯಾರಂಟಿ ಯೋಜನೆ ವಿಸ್ತರಿಸಿ ಓಡಾಡಲು ಆವಕಾಶ ಕಲ್ಪಿಸುವಂತೆ ಸಾಕಷ್ಟು ಮಹಿಳೆಯರು ಇಂದು  ಮಾಧ್ಯಮದವರೊಂದಿಗೆ ಮಾತನಾಡಿ ಸರ್ಕಾರಕ್ಕೆ ಒತ್ತಡ ತರುವಂತೆ ಆಗ್ರಹಿಸಿದರು.

ಒಟ್ಟಾರೆಯಾಗಿ ಶಿವಮೊಗ್ಗ ಜಿಲ್ಲೆಯ ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿ ನಂಬಿ ಇಂಗು ತಿಂದ………..!ವರಂತಾಗಿದ್ದಾರೆ.

ಆನಂದಪುರ-ರಿಪ್ಪನ್ ಪೇಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಒಂದೇ ಒಂದು ಸರ್ಕಾರಿ ಬಸ್ಸಿಲ್ಲ!!!!!!!


ರಾಜ್ಯ ಹೆದ್ದಾರಿ 1ರ ಆನಂದಪುರ ದಿಂದ ತೀರ್ಥಹಳ್ಳಿ ಮಾರ್ಗದಲ್ಲಿ ಒಂದೇ ಒಂದು  ಕೆಎಸ್ಆರ್ಟಿಸಿ ಬಸ್ಸುಗಳು ಸಂಚರಿಸುತ್ತಿಲ್ಲ. ಇದಕ್ಕೆ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ. ಖಾಸಗಿ  ಬಸ್ ಮಾಲೀಕರುಗಳ ಹುನ್ನಾರವೇ ಕಾರಣವೇ ಎಂಬ ಯಕ್ಷಪ್ರಶ್ನೆ ಸಾರ್ವಜನಿಕರಲ್ಲಿ ಉಂಟುಮಾಡಿದೆ.

ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ ದಿನನಿತ್ಯ  ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಸಾರ್ವಜನಿಕರು  ವಿವಿಧ ಉದ್ಯೋಗ ನಿಮಿತ್ತ ದಿನನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಈ ಮಾರ್ಗದಲ್ಲಿ ಮುಂದೆ ಒಂದು ಕೆ ಎಸ್ ಆರ್ ಟಿ ಸಿ ಬಸ್ ಸಂಚರಿಸುತ್ತಿಲ್ಲ. ಈ ಬಗ್ಗೆ ನೂರಾರು ಬಾರಿ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ  ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ವಿದ್ಯಾರ್ಥಿಗಳು ಹಾಗೂ ನಾಗರಿಕರು ಕೆಎಸ್ಆರ್ ಟಿ ಬಸ್ ಸಂಚಾರವನ್ನು ಆರಂಭಿಸಲು  ಮನವಿಯನ್ನು ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ.

ರಾಜ್ಯ ರಸ್ತೆ ಸಾರಿಗೆಯಲ್ಲಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ರಿಯಾಯಿತಿಯನ್ನು ನೀಡಿದ್ದು. ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ಸಂಚರಿಸುವ ಬಡ ವಿದ್ಯಾರ್ಥಿಗಳಿಗೆ  ಅನುಕೂಲವಾಗಬೇಕು ಎಂದರೆ ಕೆಎಸ್ ಆರ್ ಟಿಸಿ ಬಸ್ ಗಳು ಈ ಮಾರ್ಗದಲ್ಲಿ ಸಂಚರಿಸಬೇಕು.  ಹಾಗೆಯೇ ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ಪ್ರಯಾಣ ದರ  ಖಾಸಗಿ ಬಸ್ಸುಗಳಿಗಿಂತ ಶೇಕಡಾ 25ರಷ್ಟು ಕಡಿಮೆ ಇದೆ.ಇದರಿಂದ ಪ್ರತಿನಿತ್ಯ ವಿವಿಧ ಕಾರ್ಯನಿಮಿತ್ತ ತೀರ್ಥಹಳ್ಳಿಯಿಂದ-ಕೋಣಂದೂರು-ಹುಂಚ -ಗರ್ತಿಕೆರೆ- ಹೆದ್ದಾರಿಪುರ-ಮುಗುಡ್ತಿ-ರಿಪ್ಪನ್ ಪೇಟೆ-ಆನಂದ ಪುರ-ಸಾಗರಕ್ಕೆ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಲಿದೆ.

ಕೇವಲ ನೆಪ ಮಾತ್ರಕ್ಕೆ ಬಸ್ ಸಂಚಾರವನ್ನು ಆರಂಭಿಸಿ ಖಾಸಗಿ ಬಸ್ಸು ಮಾಲೀಕರುಗಳ ಹುನ್ನಾರಕ್ಕೆ ಹಾಗೂ ಪುಡಿಗಾಸಿನ ಆಸೆಗಾಗಿ ಕೆಲವು ಅಧಿಕಾರಿಗಳು ಸರ್ಕಾರಿ ಬಸ್ಸುಗಳಲ್ಲಿ  ಪ್ರಯಾಣಿಕರು ಸಂಚರಿಸುತ್ತಿಲ್ಲ ಇದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ನಷ್ಟ ಉಂಟಾಗುತ್ತಿದೆ ಎಂಬ ಕಾರಣ ನೀಡಿ ಬಸ್ ಸಂಚಾರವನ್ನು ನಿಲ್ಲಿಸಿದರು.

ಇನ್ನಾದರೂ ಚುನಾಯಿತ ಪ್ರತಿನಿಧಿಗಳು ಮತ್ತು  ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ರಾಜ್ಯ ಹೆದ್ದಾರಿ 1ರ ಮಾರ್ಗದಲ್ಲಿ  ಕೆಎಸ್ ಆರ್ ಟಿಸಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟು ಮಹಿಳೆಯರಿ ಉಚಿತವಾಗಿ ಓಡಾಡಲು ಅನೂಕೂಲ ಮಾಡಿಕೊಡುತ್ತಾರೋ ಎಂದು ಕಾದುನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

5 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

18 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

19 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

23 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

23 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

23 hours ago