SSLC ಪಾಸಾದವರ ಗಮನಕ್ಕೆ : ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ.

2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್ (ಮೆಕ್ಯಾನಿಕಲ್), ಇಂಡಸ್ಟ್ರೀಯಲ್ ರೋಬೋಟಿಕ್ಸ್ ಮತ್ತು ಡಿಜಿಟಲ್ ಮ್ಯಾನಿಫ್ಯಾಕ್ಚರಿಂಗ್ ಟೆಕ್ನಿಷಿಯನ್, ಆರ್ಟಿಸನ್ ಯೂಸಿಂಗ್ ಅಡ್ವಾನ್ಸ್ ಟೂಲ್, ಮ್ಯಾನ್ಯುಫ್ಯಾಕ್ಚರಿಂಗ್ ಪ್ರೋಸಸ್ ಕಂಟ್ರೋಲ್ ಮತ್ತು ಆಟೋಮಿಷನ್ ಕೋರ್ಸ್ಗಳಿಗೆ ಪ್ರವೇಶಗಳು ಲಭ್ಯವಿದೆ.

ಆಸಕ್ತರು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಆಧಾರ್ಕಾರ್ಡ್, 4 ಇತ್ತೀಚಿನ ಪಾಸ್ಪೋರ್ಟ್ ಭಾವಚಿತ್ರಗಳು, ಅಭ್ಯರ್ಥಿಗಳ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸಗಳೊಂದಿಗೆ ಭೇಟಿ ನೀಡಿ ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9448530349/ 9449775239 ಗಳನ್ನು ಸಂಪರ್ಕಿಸುವುದು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

41 minutes ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

1 hour ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

2 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

9 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

10 hours ago

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

22 hours ago