ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ.
2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್ಶೀಟ್ ಸಲ್ಲಿಸಿದ್ದರು.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ನ್ಯಾಯಾಲಯ ಇದೀಗ ತೀರ್ಪು ನೀಡಿದೆ.
ಆರೋಪಿತನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1,50,000 /- ರೂ ದಂಡ, ದಂಡಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.


