ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಆಗಿದ್ದು, 9 ನಿರ್ದೇಶಕರ ಬೆಂಬಲದೊಂದಿಗೆ ಮತ್ತೆ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಡಾ. ಆರ್.ಎಂ. ಮಂಜುನಾಥ ಗೌಡ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಪರವಾಗಿ 9 ಮತಗಳೊಂದಿಗೆ, ಅವಿಶ್ವಾಸ ನಿರ್ಣಯಕ್ಕೆ ಜಯ ಸಿಕ್ಕಿದೆ.
ಉಪಾಧ್ಯಕ್ಷರಾಗಿದ್ದ ಷಡಕ್ಷರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 13 ಸದಸ್ಯರಿದ್ದು ಈಗ ಗೌಡರ ಪಾಳಯ ಅಧಿಕಾರ ಹಿಡಿದಿದೆ.
ಚುನಾವಣೆ ಅಧಿಕಾರಿಯಾಗಿ ಜೆಸಿ ವೆಂಕಟಾಚಲಪತಿ ನೇತೃತ್ವದಲ್ಲಿ ಗೌಪ್ಯ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. 9 ಜನ ಅವಿಶ್ವಾಸನಿರ್ಣಯದ ಪರ ಆದರೆ, ವಿರುದ್ಧ 3ಮತ ಚಲಾವಣೆ ಆಗಿದೆ.
ಷಡಾಕ್ಷರಿ, ದುಗ್ಗಪ್ಪಗೌಡ ವಿಜಯದೇವ್, ಯೋಗೀಶ್, ವೆಂಕಟೇಶ್, ಎಂ ಎಂ ಪರಮೇಶ್, ಸುಧೀರ್, ಎಸ್ಪಿ ದಿನೇಶ್, ಶ್ರೀಪಾದ್ ಸೇರಿ 9 ಜನ ಅವಿಶ್ವಾಸದ ಪರ ಮತ ಹಾಕಿದ್ದಾರೆ. ಅವಿಶ್ವಾಸ ಪರವಾಗಿ ಭೂಕಾಂತ್ ಚನ್ನವೀರಪ್ಪ, ಅಗಡಿ ಅಶೋಕ್ ಮತಚಲಾಯಿಸಿರುವುದಾಗಿ ತಿಳಿದು ಬಂದಿದೆ.
ಒಂದು ಮುಚ್ಚಿದ ಲಕೋಟೆಯಲ್ಲಿಡಲಾಗಿದೆ. ಒಟ್ಟು ಚುನಾಯಿತ ನಿರ್ದೇಶಕರು 13 ಜನ ಇದ್ದು ಇದರಲ್ಲಿ 9 ಜನ ಅವಿಶ್ವಾಸ ನಿರ್ಣಯದ ಪರ ಮತಚಲಾವಣೆ ಆಗಿದೆ. ಹೈಕೋರ್ಟ್ ಆದೇಶದ ಮೇರೆಗೆ ನಾಮನಿರ್ದೇಶಿತರ ಮತವನ್ನೂ ಪರಿಗಣಿಸಬೇಕೆಂಬ ನ್ಯಾಯಾಲಯದ ಆದೇಶದ ಪರ ಮುಚ್ಚಿದ ಲಕೋಟೆಯಲ್ಲಿ ಚಲಾವಣೆ ಮಾಡಲಾಗಿದೆ.
8 ಕ್ಕೂ ಹೆಚ್ಚು ಮತ ಅವಿಶ್ವಾಸ ಮತದ ಪರವಾಗಿ ಚಲಾವಣೆಯಾದ ಕಾರಣ ಮುಚ್ಚಿದ ಲಕೋಟೆಯ ಮತದಾನ ಲೆಕ್ಕಕ್ಕೆ ಬಾರದಂತಾಗಿದೆ. ಅವಿಶ್ವಾಸ ನಿರ್ಣಯಕ್ಕೆ ಜಯದೊರೆತಿದೆ. ಸಧ್ಯಕ್ಕೆ ಡಿಸಿಸಿ ಬ್ಯಾಕ್ ನ ಪ್ರಭಾರಿ ಅಧ್ಯಕ್ಷರಾಗಿ ಷಡಾಕ್ಷರಿ ಆಯ್ಕೆಯಾಗಿದ್ದಾರೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…