ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ
ಶಿವಮೊಗ್ಗ : ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ನೀಡಿರುವ ಘಟನೆ ನಡೆದಿದೆ.
ಹೌದು ಜಿಲ್ಲೆಯ ಭದ್ರಾವತಿ ತಾಲೂಕಿನ ಉಕ್ಕುಂದ ನಿವಾಸಿ, ಆಟೋ ಚಾಲಕ ಸತೀಶ್ ಆ್ಯಪ್ ವೊಂದರ ಮೂಲಕ ಕಳೆದ 4 ತಿಂಗಳ ಹಿಂದೆ 06 ಸಾವಿರ ಸಾಲ ಪಡೆದಿದ್ದರು. ಆದರೆ ಈ ವೇಳೆ ಸತೀಶನ ಕೈಗೆ ಸಿಕ್ಕಿದ್ದ ನಾಲ್ಕುವರೆ (4,500) ಸಾವಿರ ಮಾತ್ರ.
ಪಡೆದ ಲೋನ್ ಹಣಕ್ಕೆ ಸತೀಶ್ ಈಗಾಗಲೇ ಎರಡು ಸಾವಿರವನ್ನು ವಾಪಸ್ ಹಿಂತಿರುಗಿಸಿದ್ದಾರೆ. ಆದರೆ ಇನ್ನು 07 ಸಾವಿರ ಹಣ ನೀಡುವಂತೆ ಸಾಲ ನೀಡಿದ ಸಂಸ್ಥೆ ಕಿರುಕುಳ ನೀಡುತ್ತಿದೆ.
ಸಾಲ ಪಡೆದ ಹಣಕ್ಕಿಂತ ದುಪ್ಪಟ್ಟು ಹಣ ನೀಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಜೊತೆಗೆ ಸಾಲ ನೀಡಿದ ಸಂಸ್ಥೆ ಪೊಲೀಸರ ಹೆಸರಿನಲ್ಲಿ ಪೋನ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ.
ಹಣ ಕಟ್ಟದಿದ್ದರೆ ಜೀಪ್ ತೆಗೆದುಕೊಂಡು ಬಂದು ಎತ್ತಾಕಿಕೊಂಡು ಹೋಗ್ತೇವೆ. ಜೈಲಿಗೆ ಕಳುಹಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಸತೀಶ್ ಆರೋಪಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್