ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ|kimmane

ಶಿವಮೊಗ್ಗ : ಕಾಂಗ್ರೆಸ್ ಗ್ಯಾರೆಂಟಿಯ ಬಗ್ಗೆ ಮಾತನಾಡುವ ಮತ್ತು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದಲ್ಲಿ ಮೋದಿಯವರು ಅಧಿಕಾರ ಹಿಡಿಯುವಾಗ ನೀಡಿದ್ದ ಭರವಸೆಯಲ್ಲಿ  15 ಲಕ್ಷ ರೂ ಜನರ ಅಕೌಂಟ್ ಗೆ ಹಾಕುವುದಾಗಿ ಹೇಳಿಕೆ ನೀಡಿದ್ದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆಯನ್ನ ನೀಡಿದ್ದರು. ಆದರೆ 9 ವರ್ಷದಿಂದ ಇದ್ಯಾವುದನ್ನು ಈಡೇರಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದರು.




ಕೇಂದ್ರದ ಮೋದಿ ಸರ್ಕಾರವನ್ನು ವಿರೋಧಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಗರದ ಗಾಂಧಿ ಪಾರ್ಕ್ ನಲ್ಲಿ ಗಾಂಧಿ ಪ್ರತಿಮೆಯ ಕೆಳಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಈ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿ ಕಾಂಗ್ರೆಸ್ ಗ್ಯಾರೆಂಟಿ ವಿಚಾರವಾಗಿ ಬಿಜೆಪಿಯವರು ಡಿಸೆಂಬರ್ ತನಕ ಸುಮ್ಮನಿರಬೇಕಿತ್ತು. ಅಲ್ಲಿಯವರೆಗೆ ಯಾವುದೇ ಗ್ಯಾರೆಂಟಿಯನ್ನ ಈಡೇರಿಸದಿದ್ದರೆ ಪ್ರತಿಭಟನೆ ನಡೆಸಬೇಕಿತ್ತು. ಆದರೆ ಬಿಜೆಪಿ ಈಗ ಆತುರಕ್ಕೆ ಬಿದ್ದಂತೆ ಕಾಣಿಸುತ್ತಿದೆ. ಕಳೆದ ಮೂರುವರೆ ವರ್ಷದಿಂದ ಉತ್ತಮ ಆಡಳಿತ ನಡೆಸದೆ ಭ್ರಷ್ಠಾಚಾರ ನೆಡೆಸಿ ಈಗ ಹತಾಶೆಯಾಗಿದೆ ಎಂದರು.


ಬಿಜೆಪಿ ಪ್ರಣಾಳಿಕೆಯಂತೆ 15 ಲಕ್ಷ ಕೊಟ್ರಾ, ಅಕ್ಕಿ ಕೊಟ್ರಾ, ಮನೆಯನ್ನ ಕೊಟ್ರಾ ಉದ್ಯೋಗ ಕೊಟ್ರಾ ಮೂರು ಗ್ರಾಂ ಬಂಗಾರ ಕೊಟ್ರಾ, ದೇಶ ಈಗ ಸುರಕ್ಷಿತವಾಗಿದೆಯಾ? ಎಂಬ ಪ್ರೆಶ್ನೆಗೆ ಇಲ್ಲ… ಇಲ್ಲ.. ಎಂದು ಪ್ರತಿಭಟನಾಕಾರರು ಕೂಗಿದರು.

ಪ್ರತಿಭಟನೆಯಲ್ಲಿ ಆರ್.ಎಂ.ಮಂಜುನಾಥ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್, ಆರ್ ಪ್ರಸನ್ನ ಕುಮಾರ್, ಪಾಲಿಕೆ ಸದಸ್ಯ ಹೆಚ್ ಎಂ ಯೋಗೀಶ್, ವಿಶ್ವನಾಥ್ ಕಾಶಿ ಮೊದಲಾದವರು ಉಪಸ್ಥಿತರಿದ್ದರು.





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

17 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

17 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

17 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

23 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

23 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

1 day ago