ಸಾಗರ : ಮಿಶ್ರ ತಳಿ ದನಗಳ ಒಟ್ಟು ನಾಲ್ಕು ಎಳೆಯ ಗಂಡು ಕರುಗಳನ್ನು ಯಾರಿಗೂ ಗೊತ್ತಾಗದಂತೆ ರಸ್ತೆ ಮಧ್ಯೆ ಅನಾಥವಾಗಿ ಬಿಟ್ಟು ಪರಾರಿಯಾದ ಘಟನೆ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ವೃತ್ತದ ಬಳಿ ನಡೆದಿದೆ.
ಪಶುಸಂಗೋಪನೆಯಲ್ಲಿ ಲಾಭದಾಯಕವಲ್ಲದ ಹೋರಿ ಕರುಗಳು ಒಂದು ವರ್ಷದೊಳಗಿನ ಪ್ರಾಯದಾಗಿದ್ದು, ಇವುಗಳಿಂದ ಯಾವುದೇ ಫಲವಿಲ್ಲ ಎಂಬ ಕಾರಣಕ್ಕೆ ಹೀಗೆ ಬಿಟ್ಟುಹೋಗಲಾಗಿದೆ ಎಂದು ಭಾವಿಸಲಾಗಿದೆ.
ಈ ಹಂತದಲ್ಲಿ ಮಾಹಿತಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ಆಗಮಿಸಿ, ಕರುಗಳಿಗೆ ನೀರು, ತಿಂಡಿ ಒದಗಿಸಿದರು. ವರದಪುರದ ಶ್ರೀಧರಾಶ್ರಮದಲ್ಲಿ ಸ್ಥಳಾವಕಾಶದ ಕೊರತೆ ಇದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ತ್ಯಾಗರ್ತಿಯ ದೊಡ್ಡಿ ಮೊದಲಾದವುಗಳ ಬಗ್ಗೆ ವಿಚಾರಿಸಿದರು.
ಈ ಕುರಿತು ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯರು ಕರುಗಳನ್ನು ರಸ್ತೆಯಲ್ಲಿಯೇ ಅನಾಥವಾಗಿ ಬಿಟ್ಟರೆ ನಾಯಿಗಳು ದಾಳಿ ಮಾಡಬಹುದು. ಆಹಾರದ ಕೊರತೆಯೂ ಕರುಗಳಿಗೆ ಕಾಡಬಹುದು. ಈ ಹಂತದಲ್ಲಿ ಶ್ರೀಧರ ಸೇವಾ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಧರರಾವ್ ಕಾನಲೆ ಅವರ ಸೂಚನೆಯಂತೆ ಅಂತಿಮವಾಗಿ ಕುಂಟಗೋಡಿನ ಪುಣ್ಯಕೋಟಿ ಗೋ ಶಾಲೆಗೆ ಈ ಹೋರಿ ಕರುಗಳನ್ನು ತೆಗೆದುಕೊಂಡು ಹೋಗಿ ಬಿಡಲಾಯಿತು. ಕರುಗಳ ಪೋಷಣೆಗೆ ಶ್ರೀಧರಾಶ್ರಮ ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ ಎಂದರು.
ಕರುಗಳ ರವಾನೆಯಲ್ಲಿ ತೀರ್ಥೇಶ್ ವರಹಳ್ಳಿ, ಸಚಿನ್ ಕರ್ಕಿಕೊಪ್ಪ, ಶ್ರೀಧರ, ಉಮೇಶ, ಸಂಕೇತ ಕರ್ಕಿಕೊಪ್ಪ, ರಾಘು ಹುಲಿಸರ, ಅಪ್ಪು ಇತರರು ಸಹಕಾರ ನೀಡಿದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…