ಗಂಡು ಕರುಗಳನ್ನು ನಡು ರಸ್ತೆಯಲ್ಲಿ ಬಿಟ್ಟು ಪರಾರಿಯಾದ ಅಪರಿಚಿತರು|bull calf

ಸಾಗರ : ಮಿಶ್ರ ತಳಿ ದನಗಳ ಒಟ್ಟು ನಾಲ್ಕು ಎಳೆಯ ಗಂಡು ಕರುಗಳನ್ನು ಯಾರಿಗೂ ಗೊತ್ತಾಗದಂತೆ ರಸ್ತೆ ಮಧ್ಯೆ ಅನಾಥವಾಗಿ ಬಿಟ್ಟು ಪರಾರಿಯಾದ ಘಟನೆ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ವೃತ್ತದ ಬಳಿ ನಡೆದಿದೆ.

ಪಶುಸಂಗೋಪನೆಯಲ್ಲಿ ಲಾಭದಾಯಕವಲ್ಲದ ಹೋರಿ ಕರುಗಳು ಒಂದು ವರ್ಷದೊಳಗಿನ ಪ್ರಾಯದಾಗಿದ್ದು, ಇವುಗಳಿಂದ ಯಾವುದೇ ಫಲವಿಲ್ಲ ಎಂಬ ಕಾರಣಕ್ಕೆ ಹೀಗೆ ಬಿಟ್ಟುಹೋಗಲಾಗಿದೆ ಎಂದು ಭಾವಿಸಲಾಗಿದೆ.

ಈ ಹಂತದಲ್ಲಿ ಮಾಹಿತಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ಆಗಮಿಸಿ, ಕರುಗಳಿಗೆ ನೀರು, ತಿಂಡಿ ಒದಗಿಸಿದರು. ವರದಪುರದ ಶ್ರೀಧರಾಶ್ರಮದಲ್ಲಿ ಸ್ಥಳಾವಕಾಶದ ಕೊರತೆ ಇದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ತ್ಯಾಗರ್ತಿಯ ದೊಡ್ಡಿ ಮೊದಲಾದವುಗಳ ಬಗ್ಗೆ ವಿಚಾರಿಸಿದರು.

ಈ ಕುರಿತು ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯರು ಕರುಗಳನ್ನು ರಸ್ತೆಯಲ್ಲಿಯೇ ಅನಾಥವಾಗಿ ಬಿಟ್ಟರೆ ನಾಯಿಗಳು ದಾಳಿ ಮಾಡಬಹುದು. ಆಹಾರದ ಕೊರತೆಯೂ ಕರುಗಳಿಗೆ ಕಾಡಬಹುದು. ಈ ಹಂತದಲ್ಲಿ ಶ್ರೀಧರ ಸೇವಾ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಧರರಾವ್ ಕಾನಲೆ ಅವರ ಸೂಚನೆಯಂತೆ ಅಂತಿಮವಾಗಿ ಕುಂಟಗೋಡಿನ ಪುಣ್ಯಕೋಟಿ ಗೋ ಶಾಲೆಗೆ ಈ ಹೋರಿ ಕರುಗಳನ್ನು ತೆಗೆದುಕೊಂಡು ಹೋಗಿ ಬಿಡಲಾಯಿತು. ಕರುಗಳ ಪೋಷಣೆಗೆ ಶ್ರೀಧರಾಶ್ರಮ ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ ಎಂದರು.

ಕರುಗಳ ರವಾನೆಯಲ್ಲಿ ತೀರ್ಥೇಶ್ ವರಹಳ್ಳಿ, ಸಚಿನ್ ಕರ್ಕಿಕೊಪ್ಪ, ಶ್ರೀಧರ, ಉಮೇಶ, ಸಂಕೇತ ಕರ್ಕಿಕೊಪ್ಪ, ರಾಘು ಹುಲಿಸರ, ಅಪ್ಪು ಇತರರು ಸಹಕಾರ ನೀಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

8 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

21 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

22 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago