ಸಾಗರ : ಮಿಶ್ರ ತಳಿ ದನಗಳ ಒಟ್ಟು ನಾಲ್ಕು ಎಳೆಯ ಗಂಡು ಕರುಗಳನ್ನು ಯಾರಿಗೂ ಗೊತ್ತಾಗದಂತೆ ರಸ್ತೆ ಮಧ್ಯೆ ಅನಾಥವಾಗಿ ಬಿಟ್ಟು ಪರಾರಿಯಾದ ಘಟನೆ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ವೃತ್ತದ ಬಳಿ ನಡೆದಿದೆ.
ಪಶುಸಂಗೋಪನೆಯಲ್ಲಿ ಲಾಭದಾಯಕವಲ್ಲದ ಹೋರಿ ಕರುಗಳು ಒಂದು ವರ್ಷದೊಳಗಿನ ಪ್ರಾಯದಾಗಿದ್ದು, ಇವುಗಳಿಂದ ಯಾವುದೇ ಫಲವಿಲ್ಲ ಎಂಬ ಕಾರಣಕ್ಕೆ ಹೀಗೆ ಬಿಟ್ಟುಹೋಗಲಾಗಿದೆ ಎಂದು ಭಾವಿಸಲಾಗಿದೆ.
ಈ ಹಂತದಲ್ಲಿ ಮಾಹಿತಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ಆಗಮಿಸಿ, ಕರುಗಳಿಗೆ ನೀರು, ತಿಂಡಿ ಒದಗಿಸಿದರು. ವರದಪುರದ ಶ್ರೀಧರಾಶ್ರಮದಲ್ಲಿ ಸ್ಥಳಾವಕಾಶದ ಕೊರತೆ ಇದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ತ್ಯಾಗರ್ತಿಯ ದೊಡ್ಡಿ ಮೊದಲಾದವುಗಳ ಬಗ್ಗೆ ವಿಚಾರಿಸಿದರು.
ಈ ಕುರಿತು ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯರು ಕರುಗಳನ್ನು ರಸ್ತೆಯಲ್ಲಿಯೇ ಅನಾಥವಾಗಿ ಬಿಟ್ಟರೆ ನಾಯಿಗಳು ದಾಳಿ ಮಾಡಬಹುದು. ಆಹಾರದ ಕೊರತೆಯೂ ಕರುಗಳಿಗೆ ಕಾಡಬಹುದು. ಈ ಹಂತದಲ್ಲಿ ಶ್ರೀಧರ ಸೇವಾ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಧರರಾವ್ ಕಾನಲೆ ಅವರ ಸೂಚನೆಯಂತೆ ಅಂತಿಮವಾಗಿ ಕುಂಟಗೋಡಿನ ಪುಣ್ಯಕೋಟಿ ಗೋ ಶಾಲೆಗೆ ಈ ಹೋರಿ ಕರುಗಳನ್ನು ತೆಗೆದುಕೊಂಡು ಹೋಗಿ ಬಿಡಲಾಯಿತು. ಕರುಗಳ ಪೋಷಣೆಗೆ ಶ್ರೀಧರಾಶ್ರಮ ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ ಎಂದರು.
ಕರುಗಳ ರವಾನೆಯಲ್ಲಿ ತೀರ್ಥೇಶ್ ವರಹಳ್ಳಿ, ಸಚಿನ್ ಕರ್ಕಿಕೊಪ್ಪ, ಶ್ರೀಧರ, ಉಮೇಶ, ಸಂಕೇತ ಕರ್ಕಿಕೊಪ್ಪ, ರಾಘು ಹುಲಿಸರ, ಅಪ್ಪು ಇತರರು ಸಹಕಾರ ನೀಡಿದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…