ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ನನ್ನ ಮೊದಲ ಆದ್ಯತೆ – ಬೇಳೂರು ಗೋಪಾಲಕೃಷ್ಣ |beluru

ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ನನ್ನ ಮೊದಲ ಆದ್ಯತೆ – ಬೇಳೂರು ಗೋಪಾಲಕೃಷ್ಣ
ಹರತಾಳುವಿನಲ್ಲಿ ಗ್ರಾಮಸ್ಥರ ಬಹುವರ್ಷದ ಬೇಡಿಕೆಯನ್ನು ಈಡೇರಿಸಿದ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಆ ನಿಟ್ಟಿನಲ್ಲಿ ಬಟ್ಟೆಮಲ್ಲಪ್ಪ – ರಿಪ್ಪನ್‌ಪೇಟೆ ಗೆ ಕೆ ಎಸ್ ಆರ್ ಟಿಸಿ ಬಸ್ ಸೌಲಭ್ಯ ಕಲ್ಪಿಸಿದ್ದೇನೆ ಎಂದು  ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಮಾಜಿ ಸಚಿವ ಹರತಾಳು ಹಾಲಪ್ಪನವರ ಸ್ವಗ್ರಾಮದ ಗ್ರಾಮಸ್ಥರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ  ದೂರದ ರಿಪ್ಪನ್‌ಪೇಟೆ ಆನಂದಪುರ ಹೀಗೆ ಸುಮಾರು 15 ಕಿ.ಮೀ.ದೂರ ಕಾಲ್ನಡಿಗೆಯಲ್ಲಿ ಹೋಗಿ ಬರಬೇಕಾದ ಅನಿವಾರ್ಯತೆ ಇದ್ದು ಈ ಬಗ್ಗೆ ಹಿಂದಿನ ಶಾಸಕರುಗಳ ಬಳಿ ಸಾಕಷ್ಟು ಬೇಡಿಕೆ ಇಟ್ಟರು ಪರಿಹಾರವಾಗಿರಲ್ಲಿಲ್ಲ ಬೇಡಿಕೆ ಸಲ್ಲಿಸಿದ ಕೇವಲ ಎರಡು ತಿಂಗಳಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರ ಸ್ಪಂದಿಸಿ ಹರತಾಳಿನಿಂದ ರಿಪ್ಪನ್‌ಪೇಟೆಗೆ ಓಡಾಡಲು ಸರ್ಕಾರಿ ಬಸ್ ಸೌಲಭ್ಯವನ್ನು ಕಲ್ಪಿಸಿದ್ದಾರೆ ಇದೊಂದು ಐತಿಹಾಸಿಕ ಕ್ಷಣ ಎಂದು ಗ್ರಾಮಸ್ಥರು ಶಾಸಕರನ್ನು ಹರ್ಷೋದ್ಘಾರದೊಂದಿಗೆ ಅಭಿನಂದಿಸಿದರು.

ಹರತಾಳು ಗ್ರಾಮದಲ್ಲಿ ಇಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರ ಸರ್ಕಾರಿ ಸಾರಿಗೆ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಬಡಜನರ ಸೇವೆಗಾಗಿಯೇ ಇರುವ ಸರ್ಕಾರ ಈಗಾಗಲೇ ಚುನಾವಣೆಯ ಸಂದರ್ಭದಲ್ಲಿ ಘೋಷಿಸಲಾದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದರೊಂದಿಗೆ ನುಡಿದಂತೆ ನಡೆದಿರುವ ಏಕೈಕ ಸರ್ಕಾರ ಎಂದು ಹೇಳಿ ದೇಶದಲ್ಲಿಯೇ 54 ಸಾವಿರ ಕೋಟಿ ರೂ ವೆಚ್ಚದಲ್ಲಿ ಯೋಜನೆಯನ್ನು ಜಾರಿಗೊಳಿಸಿದ ಪ್ರಥಮ ಸರ್ಕಾರವಾಗಿದೆ ಎಂದ ಅವರು ಕೇಂದ್ರದ ಮನಮೋಹನ್‌ಸಿಂಗ್ ಸರ್ಕಾರ ಜಾರಿಗೊಳಿಸಿದ ಉದ್ಯೋಗ ಖಾತ್ರಿ ಯೋಜನೆಯನ್ನು ಬಿಜೆಪಿ ಸರ್ಕಾರ ಕೆಲವು ಮಾರ್ಪಡುಗಳನ್ನು ಮಾಡುವ ನೆಪದಲ್ಲಿ ಬಡಜನರ ಕೂಲಿ ಕಾರ್ಮಿಕರನ್ನು ವಂಚಿತರನ್ನಾಗಿಸಿದ್ದು ಈಗಿನ ನಮ್ಮ ಸರ್ಕಾರ ಖಾತ್ರಿ ಯೋಜನೆಗೆ 100 ಕೋಟಿ ರೂ ಹಣವನ್ನು ಮೀಸಲಿಡುವ ಮೂಲಕ ಕೂಲಿಕಾರ್ಮಿಕರಿಗೆ ಉದ್ಯೋಗ ನೀಡುವುದರೊಂದಿಗೆ ಕೃಷಿ ಯೋಜನೆಗೂ ಒತ್ತು ನೀಡಿದ್ದು ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗೆ ಖಡಕ್ ಸೂಚನೆ ನೀಡಿದರು.

ಸಿದ್ದರಾಮಯ್ಯನವರ ಮುಂದಿನ ವರ್ಷದಲ್ಲಿ ಬಜೆಟ್ ನಂತರದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ಕಾಲುಸಂಕ ಹೀಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಹೆಚ್ಚು ಅನುದಾನ ತರುವುದಾಗಿ ವಿವರಿಸಿ ತುರ್ತಾಗಿ ಅದ್ಯತೆಯ ಮೇಲೆ ಅಭಿವೃದ್ದಿ ಕಾಮಗಾರಿಗಳನ್ನು ಮಾಡುವುದಾಗಿ ವಿವರಿಸಿ ಈ ಭಾರಿಯಲ್ಲಿ ಗ್ಯಾರಂಟಿ ಯೋಜನೆಗೆ ಹಣಹೊಂದಿಸಿಕೊಂಡು ಮುಂದಿನ ಸಾಲಿನಲ್ಲಿ ಹೆಚ್ಚು ಹೆಚ್ಚು ಅಭಿವೃದ್ದಿಗೆ ಅನುದಾನತರುವುದಾಗಿ ಪ್ರಕಟಿಸಿದರು.

ಈಗಾಗಲೇ ಈ ಹಿಂದಿನ ಸರ್ಕಾರದ ಶಾಸಕರು ಚುನಾವಣೆಯ ತರಾತುರಿಯಲ್ಲಿ ಕೆಲವು ಸಂಪರ್ಕ ರಸ್ತೆಗಳ ಕಾಮಗಾರಿ ಮಾಡಲಾಗಿದ್ದು ಇನ್ನೂ ಅರಂಭಿಕ ಹಂತದಲ್ಲಿಯೇ ಕಿತ್ತು ಹೋಗುವಂತಾಗಿ ಕಳಪೆ ದರ್ಜೆಯಲ್ಲಿ ಕಾಮಗಾರಿ ನಿರ್ವಹಿಸಿರುವ ಗಂಟಿನಕೊಪ್ಪ ರಸ್ತಯ ಬಗ್ಗೆ ತನಿಖೆಗೆ ಸರ್ಕಾರವನ್ನು ಆಗ್ರಹಿಸಲಾಗಿದ್ದು ಇದರಲ್ಲಿ ಇಂಜಿನಿಯರ್ ಮತ್ತು ಗುತ್ತಿಗೆದಾರರಲ್ಲಿ ಭಯ ಉಂಟಾಗಿದೆ ಎಂದು ಹೇಳಿ ಯಾವುದೇ ಇಂತಹ ಕಳಪೆ ಕಾಮಗಾರಿಗಳ ಕುರಿತು ಸಾರ್ವಜನಿಕರು ದೂರು ನೀಡಿದಲ್ಲಿ ಯಾವುದೇ ಮುಲಾಜು ಇಲ್ಲದೇ ತನಿಖೆ ನಡೆಸುವುದಾಗಿ ಹೇಳಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದೆಂದರು.

ಹರತಾಳು ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸಾರ್ವಜನಿಕರ ಪರವಾಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಸ್.ಈ.ಶಿವಪ್ಪ ಮತ್ತು ಗ್ರಾಮಾಡಳಿತದವರು ನೂತನ ಶಾಸಕ ಗೋಪಾಲಕೃಷ್ಣ ಬೇಳೂರರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಭೆಯಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾಲ್ಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ನಾಗರಾಜ್, ತಾ.ಪಂ.ಮಾಜಿ ಸದಸ್ಯ.ಬಿ.ಜೆ.ಚಂದ್ರಮೌಳಿ,ಏರಿಗಿ ಉಮೇಶ್,ಅಶೋಕ್‌ ಬೇಳೂರು,
ತಹಶೀಲ್ದಾರ್ ಧರ್ಮತ ಗಂಗಾರಾಮ ಕೋರಿ , ತಾಲ್ಲೂಕ್ ಪಂಚಾಯ್ತಿ ಪ್ರಭಾರಿ ಇಓ ನರೇಂದ್ರಕುಮಾರ್,ಸಾಕಮ್ಮ,ಉಪಾಧ್ಯಕ್ಷೆ ನಾಗರತ್ನ, ಸತ್ಯವತಿ,ನಾರಿ ರವಿ,ಶಿವಮೂರ್ತಿ,ನಾರಾಯಣಪ್ಪ, ರವಿಂದ್ರಕೆರೆಹಳ್ಳಿ,ರಮೇಶ್,ಜಿ.ಆರ್.ಗೋಪಾಲಕೃಷ್ಣ,
ಮಹಾಮಲ,ಮಾರುತಿಪುರ ಗ್ರಾಮ ಪಂಚಾಯ್ತಿ ಆಧ್ಯಕ್ಷ ಚಿದಂಬರ್ ಇನ್ನಿತರ ಹರತಾಳು ಗ್ರಾಮಸ್ಥರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

7 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

20 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

22 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago