Breaking
12 Jan 2026, Mon

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಹುಲಿಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ.

ಹೊಸನಗರ ಕಡೆಯಿಂದ ಮಂಗಳೂರಿಗೆ ಸಿಮೆಂಟ್ ತುಂಬಿಕೊಂಡು ತೆರಳುತಿದ್ದ 12 ಚಕ್ರದ ಲಾರಿ (KA 19 AB 0933) ಹುಲಿಕಲ್ ಗ್ರಾಮದ ಬಾಬುರಾವ್ ಎಂಬುವವರ ಮನೆಯ ಸಮೀಪದಲ್ಲಿಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕದಲ್ಲಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿರುವುದಿಲ್ಲ.

ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ತಪ್ಪಿದ ಭಾರಿ ಅನಾಹುತ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳನ್ನು ನಿಷೇಧಿಸಿರುವುದರಿಂದ ಈ ಭಾಗದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.  ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಸ್ಥಳದ ಅಕ್ಕಪಕ್ಕದಲ್ಲಿ ಹಲವು ಮನೆಗಳಿದ್ದು ಭಾರಿ ಅನಾಹುತ ತಪ್ಪಿದೆ.ಘಟನೆ ನಡೆದ ಸ್ಥಳದಿಂದ ಸ್ವಲ್ಪ ಅಂತರದಲ್ಲಿ ಈ ಘಟನೆ ನಡೆದಿದ್ದರೆ ಹೆಚ್ಚಿನ ಅನಾಹುತ ನಡೆಯುತಿತ್ತು ಎಂದು ಹೇಳಲಾಗುತ್ತಿದೆ.

ಮಾಸ್ತಿಕಟ್ಟೆಯಿಂದ ಬಾಳೆಬರೇ ಘಾಟ್ ವರೆಗೆ ರಸೆಯ ಎರಡು ಬದಿಗಳಲ್ಲಿ ದೊಡ್ಡ ದೊಡ್ಡ ಕಂದಕಗಳಿದ್ದು ಯಾವುದೇ ರಸ್ತೆ ಸುರಕ್ಷತಾ ಕ್ರಮಗಳನ್ನು ಇಲ್ಲಿ ಪಾಲಿಸಿರುವುದಿಲ್ಲ,ರಸ್ತೆಯ ಸುರಕ್ಷತಾ ಫಲಕವನ್ನು ಸಹ ಅಳವಡಿಸದೇ ಇರುವುದರಿಂದ ಈ ತರಹದ ಅಪಘಾತಗಳು ನಡೆಯುತ್ತಿದೆ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಕೂಡಲೇ ಕ್ರಮಕೈಗೊಳ್ಳಬೇಕೆಂದು ಸ್ಥಳೀಯ ಮುಖಂಡ ವಾಸಪ್ಪ ಮಾಸ್ತಿಕಟ್ಟೆ ಆಗ್ರಹಿಸಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version