ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ

ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು.

ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು ಪೊಟರೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.


ಶರತ್ ಕಳೆದ ರವಿವಾರ (ಜು.23ರಂದು) ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ 3:30ರ ಸುಮಾರಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಬಿದ್ದು ಸೌಪರ್ಣಿಕ ನದಿ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಅವರು ಜಲಪಾತಕ್ಕೆ ಬೀಳುತ್ತಿದ್ದ ದೃಶ್ಯಗಳು ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿತ್ತು.

ಶರತ್ ಅವರೊಂದಿಗಿದ್ದ ಸ್ನೇಹಿತ ಮಾಹಿತಿ ನೀಡಿದ ತರುವಾಯ ಆತನ ಪತ್ತೆಗೆ ಶೋಧ ಕಾರ್ಯ ಬಿರುಸುಗೊಂಡಿತ್ತು. ಕೊಲ್ಲೂರು ಠಾಣೆ ಉಪನಿರೀಕ್ಷಕಿಯರಾದ ಜಯಶ್ರೀ, ಸುಧಾರಾಣಿ, ಠಾಣೆ ಸಿಬ್ಬಂದಿ, ಅರಣ್ಯ ಇಲಾಖೆ, ಎಸ್.ಡಿ.ಆರ್.ಎಫ್ ತಂಡ, ಉಡುಪಿ, ಬೈಂದೂರು, ಕುಂದಾಪುರ ಅಗ್ನಿಶಾಮಕ ತಂಡದ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆ, ಇಂಬಳದ (ಜಿಗಣೆ) ಹುಳುಗಳು, ಕಡಿದಾದ ರಸ್ತೆಯಲ್ಲಿ ಸಾಗಿ ಕಾರ್ಯಾಚರಣೆ ನಡೆಸಲಾಗಿತ್ತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

6 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

19 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

21 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago