ದೇವಸ್ಥಾನದಲ್ಲಿ ಭಕ್ತರ ಚಿನ್ನ ಕದ್ದಿದ್ದ ತೀರ್ಥಹಳ್ಳಿ ಮೂಲದ ಕಳ್ಳ ಬಂಧನ|arrested

ಕೊಲ್ಲೂರು‌ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಭಕ್ತರ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ  ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ದಾರೆ.

ಆರೋಪಿ ತೀರ್ಥಹಳ್ಳಿ ಮೂಲದ ಬಿ.ಜೆ.ಗಿರೀಶ್ ಎಂದು ತಿಳಿದುಬಂದಿದೆ.

ಕಾಸರಗೋಡು ಮೂಲದ ಮಹಿಳೆಯೊಬ್ಬರ ವ್ಯಾನಿಟಿಬ್ಯಾಗ್​ನ್ನು ಆರೋಪಿ ಕಳವು ಮಾಡಿದ್ದನು. ಕಳೆದ .ಜೂನ್ 04 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿನ ಆವರಣದಲ್ಲಿ ಕಳ್ಳತನ ನಡೆದಿತ್ತು.  

ಈ ಪ್ರಕರಣ ಸಂಬಂಧ ಆರೋಪಿಯನ್ನ ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ಧಾರೆ. ಆರೋಪಿ ತೀರ್ಥಹಳ್ಳಿಯ ಕಂಧಕ ಗ್ರಾಮದ ನಿವಾಸಿಯಾಗಿದ್ಧಾನೆ.

ಈತನ  ಬಳಿಯಿಂದ 4,75,000 ರೂ. ಮೌಲ್ಯದ 108 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 

Leave a Reply

Your email address will not be published. Required fields are marked *