ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ
ರಿಪ್ಪನ್ ಪೇಟೆ : ಟ್ಯಾಕ್ಸಿ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ನೀಡುವಂತೆ ಟ್ಯಾಕ್ಸಿ ಮಾಲೀಕರ ಹಾಗೂ ಚಾಲಕರ ಸಂಘದ ಕೆ ಟಿ ಡಿ ಓ ವತಿಯಿಂದ ಪಿಎಸ್ ಐ ಪ್ರವೀಣ್ ರವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ವಾಹನವನ್ನು ಹಲವಾರು ವರ್ಷಗಳಿಂದ ವಿನಾಯಕ ಸರ್ಕಲ್ ನಿಂದ ತೀರ್ಥಹಳ್ಳಿ ರಸ್ತೆಯ ಟಾಕೀಸ್ ಸಮೀಪದ ಜಾಗದಲ್ಲಿ ಪಾರ್ಕಿಂಗ್ ಮಾಡುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಟ್ಯಾಕ್ಸಿ ವಾಹನ ಚಾಲಕರು ತಮ್ಮ ವಾಹನವನ್ನು ನಿಲ್ಲಿಸುತ್ತಿದ್ದು ಸಂಚಾರಕ್ಕೆ ತೊಂದರೆ ಆಗದಂತೆ ನಡೆದುಕೊಳ್ಳುತ್ತಿದ್ದರು.
ಪೊಲೀಸ್ ಇಲಾಖೆ ವಾಹನ ನಿಲುಗಡೆ ಪ್ರದೇಶವನ್ನು ಸದ್ರಿ ಟ್ಯಾಕ್ಸಿ ವಾಹನ ನಿಲುಗಡೆ ತನಕ ವಿಸ್ತರಿಸಿದ್ದು ಟ್ಯಾಕ್ಸಿ ವಾಹನ ಮಾಲೀಕ ಚಾಲಕರಿಗೆ ತಮ್ಮ ವಾಹನವನ್ನು ನಿಲುಗಡೆ ಮಾಡಲು ತೊಂದರೆಯಾಗಿದ್ದು ಸ್ಥಳವಕಾಶವಿಲ್ಲದೆ ಪರದಾಡುವಂತಾಗಿದ್ದು ನುಂಗಲಾರದ ತುತ್ತಾಗಿದೆ.
ಈ ಸಂಬಂಧ ಟ್ಯಾಕ್ಸಿ ಮಾಲೀಕರ ಹಾಗೂ ಚಾಲಕರ ಸಂಘದ ಕೆ ಟಿ ಡಿ ಓ ವತಿಯಿಂದ ಪದಾಧಿಕಾರಿಗಳು ಪಟ್ಟಣದ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ರವರಿಗೆ ಮನವಿ ಸಲ್ಲಿಸಿ ತಮಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಮನವರಿಕೆ ಮಾಡಿ ಟ್ಯಾಕ್ಸಿ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ನೀಡುವಂತೆ ಆಗ್ರಹಿಸಿದ್ದಾರೆ.
ಇದುವರೆಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸೇವೆ ಸಲ್ಲಿಸುತ್ತಿದ್ದು ಈಗ ನಮಗೆ ಸ್ಥಳಾವಕಾಶವಿಲ್ಲದಂತೆ ಆಗಿದೆ ಈ ಬಗ್ಗೆ ಸೂಕ್ತ ಕ್ರಮ ವಹಿಸಿ ಸಂಬಂಧ ಪಟ್ಟ ಅಧಿಕಾರಿಗಳು ವಾಹನಗಳ ಪಾರ್ಕಿಂಗ್ ಗೆ ಸೂಕ್ತ ಸ್ಥಳವನ್ನು ಸೂಚಿಸಬೇಕು ಎಂದು ರಿಪ್ಪನ್ ಪೇಟೆ ಟ್ಯಾಕ್ಸಿ ಮಾಲೀಕರ ಹಾಗೂ ಚಾಲಕರ ಸಂಘದ ಕೆ ಟಿ ಡಿ ಓ ವತಿಯಿಂದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್