ರಿಪ್ಪನ್‌ಪೇಟೆ ಗ್ರಾಪಂ ಪಿಡಿಓ ಚಂದ್ರಶೇಖರ್ ವರ್ಗಾವಣೆ|ನೂತನ ಪಿಡಿಓ ಯಾರು ಗೊತ್ತಾ…???PDO

ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಳೆದ ಹತ್ತು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಚಂದ್ರಶೇಖರ್ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಶಿಕಾರಿಪುರ ತಾಲೂಕಿನ ತಾಳಗುಂದ ಗ್ರಾಪಂ ನಲ್ಲಿ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಧುಸೂಧನ್ ಎನ್ ನೇಮಕವಾಗಿದ್ದಾರೆ.

ರಿಪ್ಪನ್‌ಪೇಟೆ ಗ್ರಾಪಂ ಗೆ ನೂತನವಾಗಿ ವರ್ಗಾವಣೆಗೊಂಡಿರುವ ಮಧುಸೂಧನ್ ಎನ್ ಮೂಲತಃ ರಿಪ್ಪನ್‌ಪೇಟೆ ಶಬರೀಶ ನಗರದವರಾಗಿದ್ದು ಈ ಹಿಂದೆ ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ವರ್ಷಗಳ ಸೇವೆ ಸಲ್ಲಿಸಿದ್ದರು.ವರ್ಗಾವಣೆಗೊಂಡಿರುವ ಪಿಡಿಓ ಚಂದ್ರಶೇಖರ್ ರವರಿಗೆ ಸದ್ಯಕ್ಕೆ ಯಾವುದೇ ಸ್ಥಳ ನಿಯೋಜನೆಯಾಗಿರುವುದಿಲ್ಲ.

ರಿಪ್ಪನ್‌ಪೇಟೆ ಗ್ರಾಮಪಂಚಾಯಿತಿಗೆ ರಾಷ್ಟ್ರ ಮಟ್ಟದ ಕೀರ್ತಿ ತಂದ ಪಿಡಿಒ ಚಂದ್ರಶೇಖರ್

ಕಳೆದ ಹತ್ತು ವರ್ಷಗಳ ಕಾಲ ರಿಪ್ಪನ್‌ಪೇಟೆ ಪಿಡಿಒ ಆಗಿ ಸೇವೆ ಸಲ್ಲಿಸಿದ ಉತ್ಸಾಹಿ ಯುವ ಪಿಡಿಒ ಚಂದ್ರಶೇಖರ್,ಅಧ್ಯಕ್ಷರು,ಸದಸ್ಯರ ವಿಶ್ವಾಸಗಳಿಸಿ ರಾಷ್ಟ ಮಟ್ಟದಲ್ಲಿ ರಿಪ್ಪನ್‌ಪೇಟೆಯ ಕೀರ್ತಿ ಸಾರಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ,ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಕ್ಕು ಡಿಜಿಟಲ್ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ (ಡಿಜಿಟಲ್ ರಿಚಾರ್ಜ್ ಜೊತೆ), ಹಸಿ ಕಸ / ಒಣ ಕಸ ಬೇರ್ಪಡಿಸಲು ಪ್ರತಿ ಮನೆಗೆ ಉಚಿತವಾಗಿ ಎರಡು ಬಣ್ಣದ ಬಕೇಟ್ ವಿತರಣೆ, ಅಲ್ಲದೆ,ರಾಜ್ಯ ಹಾಗೂ ಜಿಲ್ಲಾ ಮಟ್ಟದ  ಕಾರ್ಯಕ್ರಮಗಳ ಯಶಸ್ವಿ ಆಯೋಜನೆ ಇವರ ಶ್ರಮವನ್ನು ಸಾರುತ್ತದೆ.

ಮಾದರಿ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆ:

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಮಾದರಿಯಾದ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಿದ್ದ ಇವರು,ಪ್ರತಿ ಗ್ರಾಮ,ಶಾಲೆಗಳಲ್ಲಿ ತ್ಯಾಜ್ಯ ವಿಂಗಡಣೆಗೆ ಅರಿವು ಮೂಡಿಸುವ ಕ್ರಮಕೈಗೊಂಡು ಪರಿಸರ ಕಾಳಜಿ ಮೆರೆದಿದ್ದಾರೆ. ಈ ಘಟಕದ ವೀಕ್ಷಣೆಗೆ ರಾಜ್ಯ ಹಾಗೂ ರಾಷ್ಟ್ರದ ಹಿರಿಯ ಅಧಿಕಾರಿಗಳು,ವಿವಿಧ ಗ್ರಾಮಪಂಚಾಯಿತಿ ಸದಸ್ಯರು ಭೇಟಿ ನೀಡಿ,ತಮ್ಮ ವ್ಯಾಪ್ತಿಯಲ್ಲಿ ಇದೇ ಮಾದರಿಯ ಘಟಕ ಅಳವಡಿಕೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.


ಇವರ ಅಧಿಕಾರವಧಿಯಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯಿತಿಗೆ ದೀನ ದಯಾಳ್ ಉಪಾಧ್ಯಾಯ ಗ್ರಾಮ ಸಶಕ್ತಿಕರಣ ರಾಷ್ಟ್ರ ಪ್ರಶಸ್ತಿ, ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಕರ್ನಾಟಕ ವಿಧಾನ ಪರಿಷತ್ ಪುರಸ್ಕಾರ ಸೇರಿದಂತೆ ಒಂದು ರಾಷ್ಟ್ರ ಹಾಗೂ ಎರಡು ರಾಜ್ಯ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗಳು ದೊರೆತಿದೆ.

ಗ್ರಾಮಪಂಚಾಯಿತಿಗೆ ಪಿಡಿಒಗಳಾಗಿ ಅಧಿಕಾರಿಗಳು ಬರುತ್ತಾರೆ /ಹೋಗುತ್ತಾರೆ.ಆದರೆ,ಅವರ ಆಡಳಿತ ಅವಧಿಯಲ್ಲಿ ಕೈಗೊಂಡ ಕ್ರಮಗಳು ಶಾಶ್ವತವಾಗಿ ಉಳಿಯುತ್ತವೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

7 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

20 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

22 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago