ರಿಪ್ಪನ್‌ಪೇಟೆ : ಮಳೆ ಕೊರತೆ ನಡುವೆಯೂ ಬಿರುಸುಗೊಂಡ ಕೃಷಿ ಚಟುವಟಿಕೆ|Agricultural activity

ಹೊಸನಗರ ತಾಲ್ಲೂಕಿನಲ್ಲಿ 9300 ಹೆಕ್ಟೇರ್ ಕೃಷಿ ಭೂ ಪ್ರದೇಶದಲ್ಲಿ ಕಬ್ಬು, ಮೆಕ್ಕೆಜೋಳ ಮತ್ತು ಭತ್ತ ಬೆಳೆಯುವ ಭೂಮಿ ಇದ್ದು ಜೂನ್ ಅಂತ್ಯದೊಳಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ಕೃಷಿ ಬಿತ್ತನೆ ಕಾರ್ಯದಲ್ಲಿ ವಿಳಂಬವಾಗಿದೆ ಎಂದು ಹೊಸನಗರ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್‌ ಹೆಗಡೆ ತಿಳಿಸಿದರು.

ರಿಪ್ಪನ್‌ಪೇಟೆ ರೈತ ಸಂಪರ್ಕ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತಾಲ್ಲೂಕಿನಲ್ಲಿ ಭತ್ತ ಬಿತ್ತನೆಗೆ 8600 ಹೆಕ್ಟೇರ್ ಗುರಿ ಹೊಂದಿದ್ದು ಮಳೆ ವಿಳಂಬದ ಕಾರಣ ಭತ್ತದ ಸಸಿಮಡಿ ತಯಾರಿ ಪ್ರಗತಿಯಲ್ಲಿದೆ. ಅಲ್ಲದೆ ಮೆಕ್ಕೆಜೋಳ ಬಿತ್ತನೆ ಗುರಿ 500 ಹೆಕ್ಟೇರ್ ಆಗಿದ್ದು ಈವರೆಗೆ 450 ಹೆಕ್ಟೇರ್‌ನಷ್ಟು ಬಿತ್ತನೆಯಾಗಿದೆ. ಹಾಗೇಯೆ 200 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬಿತ್ತನೆ ಕಾರ್ಯ ಮಾಡುವ ಮೂಲಕ ಒಟ್ಟು 8600 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಮಾಡಲಾಗುತ್ತಿದೆ ಎಂದರು.

ಜೂನ್ ತಿಂಗಳಲ್ಲಿ ವಾಡಿಕೆಯಂತೆ 661 ಮಿ.ಮೀ.ನಷ್ಟು ಮಳೆಯಾಗಬೇಕಿದ್ದು ಆದರೆ ಜೂನ್ 30ರ ಅಂತ್ಯಕ್ಕೆ 162 ಮಿ.ಮೀ.ನಷ್ಟು ಮಾತ್ರ ಮಳೆಯಾಗುವ ಮೂಲಕ ಶೇಕಡಾ 75 ರಷ್ಟು ಮಳೆ ಕೊರತೆಯಾಗಿರುತ್ತದೆ. ಅಲ್ಲದೇ ಜುಲೈ 1 ರಿಂದ 5 ರವರೆಗೆ ತಾಲ್ಲೂಕಿನಲ್ಲಿ 370 ಮಿ.ಮೀ.ನಷ್ಟು ಮಳೆಯಾಗಿರುತ್ತದೆಂದು ವಿವರಿಸಿದ ಅವರು, ಪ್ರಸ್ತುತ ಗೊಬ್ಬರದ ದಾಸ್ತಾನು ಸಾಕಷ್ಟು ಇದ್ದು ಯಾವುದೇ ಕೊರತೆ ಇರುವುದಿಲ್ಲ. ಯೂರಿಯಾ ಗೊಬ್ಬರ 130 ಟನ್, ಡಿ.ಎ.ಪಿ.150 ಟನ್, ಪೊಟ್ಯಾಷ್ 110 ಟನ್, ಎನ್.ಡಿ.ಕೆ. ಕಾಂಪ್ಲೆಕ್ಸ್ 550 ಟನ್ ಗೊಬ್ಬರ ದಾಸ್ತಾನಿದ್ದು ರೈತರು ಗೊಬ್ಬರಕ್ಕಾಗಿ ಪರದಾಡುವ ಅಗತ್ಯ ಇರುವುದಿಲ್ಲ. ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಗೊಬ್ಬರ ಬಿತ್ತನೆ ಬೀಜ ಇನ್ನಿತರ ಕೃಷಿ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಬಹುದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕೆರೆಹಳ್ಳಿ ಹೋಬಳಿ ರೈಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶಾಂತಮೂರ್ತಿಯವರು ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ತಳಿಯ ಭತ್ತದ ತಳಿಗಳಾದ ಅಭಿಲಾಷ 100 ಕ್ವಿಂಟಾಲ್, 1001 ತಳಿಯ 75 ಕ್ವಿಂಟಾಲ್, ಜಯಾ 10 ಕ್ವಿಂಟಾಲ್, ಆರ್.ಎನ್.ಆರ್.75 ಕ್ವಿಂಟಾಲ್ ಹಾಗೂ ಮೆಕ್ಕೆಜೋಳ ತಳಿಗಳಾದ ಕಾವೇರಿ 20 ಕ್ವಿಂಟಾಲ್, ದ್ರೋಣ 15 ಕ್ವಿಂಟಾಲ್, ಕಾವೇರಿ ಸೂಪರ್ 5 ಕ್ವಿಂಟಾಲ್, ಕಾವೇರಿ ಸಿಪಿ 5 ಕ್ವಿಂಟಾಲ್ ಬಿತ್ತನೆ ಬೀಜವನ್ನು ತರಿಸಲಾಗಿದ್ದು ಈಗಾಗಲೇ ಹೋಬಳಿ ವ್ಯಾಪ್ತಿಯ ರೈತರು ಬಿತ್ತನೆ ಬೀಜವನ್ನು ಖರೀದಿಕೊಂಡು ಹೋಗುತ್ತಿದ್ದಾರೆಂದು ವಿವರಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

3 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

4 hours ago

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

16 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

20 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

22 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

1 day ago