ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ಮಾತು ಕೇಳಿ ಬಂದಿದೆ.ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಆದೇಶ ಮಾಡಿರಬಹುದು, ಮಕ್ಕಳಿಗೆ ಅಡುಗೆ ಮಾಡುವಾಗ ಅಡುಗೆಯಲ್ಲಿ ಗಾಜಿನ ಚೂರುಗಳು ಬೀಳಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ವಿಷಯದಲ್ಲಿ ಧಾರ್ಮಿಕ ವಿಚಾರವನ್ನು ಅಡ್ಡ ತರುವುದು ಬೇಡ ಎಂದು ಅವರು ಹೇಳಿದ್ದಾರೆ. ಅಡುಗೆ ತಯಾರಿಸುವಾಗ ಯಾವ ಕ್ರಮವನ್ನು ಅನುಸರಿಸಿದರೂ ಸಹ ಅದು ಆರೋಗ್ಯಕರವಾಗಿರುತ್ತದೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಆಧರಿಸಿರುತ್ತದೆ ಎಂದು ಹೇಳಿದ್ದಾರೆ.
ಗ್ಲೌಸ್ ಹಾಗೂ ತಲೆಗೆ ಕ್ಯಾಪ್ ಹಾಕಿಕೊಂಡು ಅಡುಗೆ ಮಾಡುವಂತೆ ಈಗಾಗಲೇ ತಿಳಿಸಲಾಗಿದೆ. ಆ ನಿಮಯವನ್ನು ಕಡ್ಡಾಯವಾಗಿ ಎಲ್ಲ ಆಹಾರ ತಯಾರಕರೂ ಅನುಸರಿಸಲೇ ಬೇಕು. ಅಡುಗೆ ಮಾಡುವ ವೇಳೆ ಬಳೆಗಳನ್ನು ತೆಗೆದು ಅಡುಗೆ ಮಾಡಿ ಎಂದು ಹೇಳಿರಬೇಕು. ಈಗಾಗಲೇ ಎರಡು ಪ್ರಕರಣಗಳಲ್ಲಿ ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಮಕ್ಕಳು ಅಸ್ವಸ್ಥಗೊಂಡಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…