ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ಮಾತು ಕೇಳಿ ಬಂದಿದೆ.ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಆದೇಶ ಮಾಡಿರಬಹುದು, ಮಕ್ಕಳಿಗೆ ಅಡುಗೆ ಮಾಡುವಾಗ ಅಡುಗೆಯಲ್ಲಿ ಗಾಜಿನ ಚೂರುಗಳು ಬೀಳಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ವಿಷಯದಲ್ಲಿ ಧಾರ್ಮಿಕ ವಿಚಾರವನ್ನು ಅಡ್ಡ ತರುವುದು ಬೇಡ ಎಂದು ಅವರು ಹೇಳಿದ್ದಾರೆ. ಅಡುಗೆ ತಯಾರಿಸುವಾಗ ಯಾವ ಕ್ರಮವನ್ನು ಅನುಸರಿಸಿದರೂ ಸಹ ಅದು ಆರೋಗ್ಯಕರವಾಗಿರುತ್ತದೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಆಧರಿಸಿರುತ್ತದೆ ಎಂದು ಹೇಳಿದ್ದಾರೆ.
ಗ್ಲೌಸ್ ಹಾಗೂ ತಲೆಗೆ ಕ್ಯಾಪ್ ಹಾಕಿಕೊಂಡು ಅಡುಗೆ ಮಾಡುವಂತೆ ಈಗಾಗಲೇ ತಿಳಿಸಲಾಗಿದೆ. ಆ ನಿಮಯವನ್ನು ಕಡ್ಡಾಯವಾಗಿ ಎಲ್ಲ ಆಹಾರ ತಯಾರಕರೂ ಅನುಸರಿಸಲೇ ಬೇಕು. ಅಡುಗೆ ಮಾಡುವ ವೇಳೆ ಬಳೆಗಳನ್ನು ತೆಗೆದು ಅಡುಗೆ ಮಾಡಿ ಎಂದು ಹೇಳಿರಬೇಕು. ಈಗಾಗಲೇ ಎರಡು ಪ್ರಕರಣಗಳಲ್ಲಿ ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಮಕ್ಕಳು ಅಸ್ವಸ್ಥಗೊಂಡಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…