ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ.
ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ.
ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್ ತೆರಳಲಿದೆ. ಮಧ್ಯಾಹ್ನ 1:30ಕ್ಕೆ ಬೆಂಗಳೂರು ತಲುಪಲಿದೆ. ಸಧ್ಯ ದಿನಕ್ಕೆ ಒಂದು ವಿಮಾನ ಹಾರಾಟ ನಡೆಸಲಿದ್ದು, ಪ್ರಯಾಣಿಕರ ಸ್ಪಂದನೆಗೆ ಅನುಗುಣವಾಗಿ ಬೇರೆ ಸ್ಥಳಗಳಿಗೂ ವಿಮಾನ ಹಾರಾಟ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಇಂಡಿಗೋ ಸಂಸ್ಥೆಯು ಎಟಿಆರ್ 72 ಮಾದರಿಯ 78 ಆಸನಗಳ ವಿಮಾನ ಹಾರಾಟ ಆರಂಭಿಸುತ್ತಿದೆ. ಜುಲೈ 24ರಂದು ವಿಮಾನ ಹಾರಾಟಕ್ಕೆ ಅಧಿಕೃತ ಚಾಲನೆ ಸಂಭ್ರಮವನ್ನು ಸಂಸ್ಥೆ ಸೋಗಾನೆ ವಿಮಾನ ನಿಲ್ದಾಣದಲ್ಲಿ ಹಂಚಿಕೊಳ್ಳಲಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್