ಬೆಳಗಾವಿ ಜಿಲ್ಲೆಯ ಚಿಕ್ಕೂಡಿ ತಾಲೂಕಿನ ಹಿರೇಕೊಡಿ ನಂದಿ ಪರ್ವತದ ಜೈನ್ ಮಂದಿರದ ಆಚಾರ್ಯ 108 ಕಾಮಕುಮಾರ ನಂದಿ ಮುನಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ಸರ್ವಸಂಗ ಪರಿತ್ಯಾಗಿಗಳಾಗಿರುವ ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಅಲ್ಲದೇ ಅವರ ಹತ್ಯೆ ನಡೆದು ಮೂರು ದಿನವಾಗಿದ್ದು, ಸರ್ಕಾರ ಇನ್ನೂ ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ. ಈ ಹತ್ಯೆಯಲ್ಲಿ ಸಾಕಷ್ಟು ಜನರ ಕಾಣದ ಕೈಗಳಿವೆ. ಕೇವಲ ದುಡ್ಡಿನ ವಿಚಾರವಾಗಿ ತನಿಖೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವುದರ ಮೂಲಕ ದಾರಿ ತಪ್ಪಿಸುವ ಪ್ರಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪ, ಡಾ.ರಾಜನಂದಿನಿ ಕಾಗೋಡು, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ ಸೇರಿದಂತೆ ಕಾರ್ಯಕರ್ತರ ನೇತೃತ್ವದಲ್ಲಿ ಎಸಿ ಅವರಿಗೆ ಮನವಿಯನ್ನು ಕೊಟ್ಟು ಸರ್ಕಾರಕ್ಕೆ ತನಿಖೆ ಮಾಡಲು ಒತ್ತಾಯ ಮಾಡುತ್ತಿದ್ದೇವೆ. ಕೊಲೆ ನಡೆದು ಎರಡು ದಿನಗಳಾದರೂ ಘಟನಾ ಸ್ಥಳಕ್ಕೆ ಸಿಎಂ ಹಾಗೂ ಗೃಹ ಸಚಿವರುಗಳು ಭೇಟಿ ನೀಡದೇ ಇರುವುದು ಖಂಡನೀಯವಾಗಿದೆ. ಕೊಲೆಗಾರರ ಹೆಸರನ್ನು ಬಹಿರಂಗಪಡಿಸದೇ ಸರ್ಕಾರ ಅವರ ರಕ್ಷಣೆ ಮಾಡಲು ಮುಂದಾಗಿದೆ.
ಇದರಿಂದ ಕೊಲೆಯ ಕುರಿತು ಸೂಕ್ತ ತನಿಖೆ ನಡೆಸಿ ಕೊಲೆಗಾರರಿಗೆ ಸೂಕ್ತ ಶಿಕ್ಷೆ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಕೇವಲ ಎರಡು ತಿಂಗಳಲ್ಲಿ ಜೈನ ಮುನಿಗಳ ಹಾಗೂ ವೇಣುಗೋಪಾಲ ಅವರ ಹತ್ಯೆ ನಡೆದಿವೆ. ಇದರಿಂದ ಬಿಜೆಪಿ ಖಂಡಿಸುತ್ತದೆ. ತಕ್ಷಣ ಎರಡು ಕೊಲೆಗಳ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಬಿ.ವೈ.ರಾಘವೇಂದ್ರ ಆಗ್ರಹಿಸಿದರು.
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…