ಸಾಗರ : ಬ್ಯಾಂಕ್ನಿಂದ ಪಾನ್ ಅಪ್ಡೇಟ್ಗೆ ಬಂದ ವಾಟ್ಸ್ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ.
ನಗರದ ಕೆನರಾ ಬ್ಯಾಂಕ್ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್ರ ಮೊಬೈಲ್ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್ಡೇಟ್ ಮಾಡಲು ವಾಟ್ಸ್ಅಪ್ ಸಂದೇಶ ಬಂದಿದೆ.
ಅದನ್ನು ನಿಜವೆಂದು ನಂಬಿದ ಶರೀಫ್ ಮಾಹಿತಿಗಳನ್ನು ತುಂಬಿದ್ದಾರೆ. ಈ ಹಂತದಲ್ಲಿ ಅವರ ಎರಡು ಮೊಬೈಲ್ ಸಂಖ್ಯೆಗಳಿಗೆ ಖಾತೆಯಿಂದ ಹಣ ಖರ್ಚಾದ ಸಂದೇಶ ಬಂದಿದೆ.
ಆಗ ಗಾಬರಿಗೊಂಡ ಶರೀಫ್ ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಅವರು ಮೋಸ ಹೋಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆದಿದೆ.
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…