ಸಾಗರ : ಬ್ಯಾಂಕ್ನಿಂದ ಪಾನ್ ಅಪ್ಡೇಟ್ಗೆ ಬಂದ ವಾಟ್ಸ್ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ.
ನಗರದ ಕೆನರಾ ಬ್ಯಾಂಕ್ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್ರ ಮೊಬೈಲ್ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್ಡೇಟ್ ಮಾಡಲು ವಾಟ್ಸ್ಅಪ್ ಸಂದೇಶ ಬಂದಿದೆ.
ಅದನ್ನು ನಿಜವೆಂದು ನಂಬಿದ ಶರೀಫ್ ಮಾಹಿತಿಗಳನ್ನು ತುಂಬಿದ್ದಾರೆ. ಈ ಹಂತದಲ್ಲಿ ಅವರ ಎರಡು ಮೊಬೈಲ್ ಸಂಖ್ಯೆಗಳಿಗೆ ಖಾತೆಯಿಂದ ಹಣ ಖರ್ಚಾದ ಸಂದೇಶ ಬಂದಿದೆ.
ಆಗ ಗಾಬರಿಗೊಂಡ ಶರೀಫ್ ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಅವರು ಮೋಸ ಹೋಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆದಿದೆ.
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…