ಸಿದ್ದರಾಮಯ್ಯನವರು ತನ್ನ ರಾಜಕೀಯ ತೀಟೆಗೋಸ್ಕರ ಬಜೆಟ್ ಅನ್ನು ದುರುಪಯೋಗ ಮಾಡಿಕೊಂಡಿದ್ದಾರೆ – ಆರಗ ಜ್ಞಾನೇಂದ್ರ|Araga

ಸಿದ್ದರಾಮಯ್ಯನವರು ತನ್ನ ರಾಜಕೀಯ ತೀಟೆಗೋಸ್ಕರ ಬಜೆಟ್ ಅನ್ನು ದುರುಪಯೋಗ ಮಾಡಿಕೊಂಡಿದ್ದಾರೆ – ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ – ಜು.7 ರಂದು ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡಿಸಿದರು. ಅದು ಬಜೆಟ್ ಪುಸ್ತಕ ಎನ್ನುವುದಕ್ಕಿಂತ ಕೇಂದ್ರ ಹಾಗೂ ರಾಜ್ಯದ ಹಳೆಯ ಬಿಜೆಪಿ ಸರ್ಕಾರವನ್ನು ಟೀಕೆ ಮಾಡುವ ಪುಸ್ತಕ.14 ನೇ ಬಾರಿ ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದ್ರು. ಆದರೆ ತನ್ನ ರಾಜಕೀಯ ತೀಟೆಗೋಸ್ಕರ ಬಜೆಟ್ ಅನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇದು ಕೂಡ ಇತಿಹಾಸದಲ್ಲಿ ಸೇರಿರುವ ಘಟನೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ರಿಪ್ಪನ್ ಪೇಟೆಯಲ್ಲಿ ಸುದ್ದಿಗೋಷ್ಠಿ ನೆಡೆಸಿ ಮಾತನಾಡಿದ ಅವರು ಹಿಂದಿನ ಯಾವುದೇ ಸರ್ಕಾರಗಳು ಕೂಡ ಬಜೆಟ್ ವಿಷಯದಲ್ಲಿ ಟೀಕೆ ಮಾಡಿರಲಿಲ್ಲ ಹಾಗೂ ತಮ್ಮ ಗ್ಯಾರೆಂಟಿ ಕೊಡಲು ಸಂಪೂರ್ಣ ವಿಫಲವಾಗಿದ್ದಾರೆ.10 ಕೆಜಿ ಅಕ್ಕಿ ಕೊಡುವುದಾಗಿ ಆಶ್ವಾಸನೆ ನೀಡಿ ಈಗ ಕೇಂದ್ರದ ಮೇಲೆ ಬೆರಳು ತೋರಿಸುತ್ತಿದ್ದಾರೆ. ಅನ್ನಭಾಗ್ಯ ನಂದೇ ಎಂದು ಎದೆ ಬಡಿದುಕೊಳ್ಳುತ್ತಿದ್ದ ಸಿದ್ದರಾಮಯ್ಯನವರು ಈಗ ಸುಮ್ಮನಾಗಿದ್ದಾರೆ. ಕೇಂದ್ರ ಸರ್ಕಾರ ಕೋವಿಡ್ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದಾರೆ. ಕೋವಿಡ್ ನಂತರ 5 ಕೆಜಿ ಗೆ ಇಳಿಸಿದ್ದಾರೆ. 80 ಕೋಟಿ ಜನರಿಗೆ ಈ ದೇಶದಲ್ಲಿ ಅಕ್ಕಿ ನೀಡಲಾಗುತ್ತಿದೆ ಎಂದರು.


ಜಗತ್ತಿಗೆ ಶಾಂತಿ ಬೋಧಿಸುವ, ಯಾರಿಗೂ ತೊಂದರೆ ಕೊಡದಿರುವ ಜೈನ ಮುನಿಗಳು ಎಂದರೆ ಸ್ವತಃ ದೇವರು ಎಂದೆಂಸಿಕೊಳ್ಳುವ, ಎಲ್ಲವನ್ನು ತ್ಯಜಿಸಿ ನಿಂತಿರುವ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ನೋವಿನ ಸಂಗತಿಯಾಗಿದ್ದು ಆ ಹತ್ಯೆಯನ್ನು ಖಂಡಿಸುತ್ತೇನೆ .

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಕೊಲೆ ಸುಲಿಗೆ ತುಂಬಾ ಜಾಸ್ತಿಯಾಗಿದೆ. ಹೊಸ ಸರ್ಕಾರ ಬಂದ ನಂತರ ಈ ರೀತಿಯಾಗಿರುವುದು ಖಂಡನೀಯ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಇನ್ನಷ್ಟು ಬಿಗಿ ಧೋರಣೆ ತೋರಿಸಿ ಈ ರೀತಿ ಹತ್ಯೆಯನ್ನು ನಿಲ್ಲಿಸಬೇಕೆಂದು ಆಗ್ರಹಿಸುತ್ತೇನೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಕ್ಕಿ ಕೊಡಲು ಆಗದಿದ್ದಾಗ ಹಣ ನೀಡಿ ಎಂದು ನಾವೇ ಹೇಳೆದ್ದೆವು. ಆದರೆ ಆಗ ಹಣ ತಿನ್ನಲು ಬರುತ್ತಾ ಎಂದು ಪ್ರೆಶ್ನೆ ಮಾಡಿದ್ದರು.ಈಗ ಅವರೇ ಹಣ ನೀಡಲು ಹೊರಟಿದ್ದಾರೆ.ಈಗ ಇವರು ಕೊಡುವ ಹಣವನ್ನು ತಿನ್ನಲು ಆಗುತ್ತಾ? ಮಾರ್ಕೆಟ್ ಲೆಕ್ಕದಲ್ಲಿ ಹಣವನ್ನು ನೀಡುವುದಾದರೆ ಅವರು ಕೊಡುವ 170 ರೂ ಗಳಲ್ಲಿ ಎರಡೂವರೆ ಕೆಜಿ ಕೂಡ ಬರಲ್ಲ. ಕೇಂದ್ರದಲ್ಲಿ ಅಕ್ಕಿ ಇದೆ ಆದರೆ ಅದನ್ನು 5 ವರ್ಷಕ್ಕೆ ಆಗುವಷ್ಟು ದಾಸ್ತಾನು ಇಟ್ಟುಕೊಳ್ಳಬೇಕು. ಕೋವಿಡ್ ನಂತಹ ರೋಗಗಳು ಬಂದಾಗ ದೇಶಕ್ಕಾಗಿ ಅಕ್ಕಿ ದಾಸ್ತಾನು ಇರಬೇಕು ಎಂದರು.

ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ‌ ಮಂಜುನಾಥ್ ,ಮುಖಂಡರಾದ ಕಗ್ಗಲಿ ಲಿಂಗಪ್ಪ,ಆನಂದ್ ಮೆಣಸೆ, ,ಸುಧೀಂದ್ರ ಪೂಜಾರಿ , ಸುಧೀರ್ ಪಿ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

10 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

10 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

14 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

16 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

17 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago