ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ವಸತಿಗೃಹಕ್ಕೆ ಟಾರ್ಪಲ್ ರಕ್ಷಣೆ|Police quarters

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ಟಾರ್ಪಲ್ ಗೆ ಮೊರೆ ಹೋದ ಪೊಲೀಸರು
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿದೆ.

ಆದರೆ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಮಳೆಯ ನೀರಿನಿಂದ ಸೋರುತ್ತಿದೆ. ಸೋರುತ್ತಿರುವ ವಸತಿ ಗೃಹ ಗಳ  ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಹಾಕಿಕೊಂಡು ಮಳೆಯ ನೀರಿನಿಂದ ರಕ್ಷಣೆ   ಪಡೆಯುತ್ತಿದ್ದಾರೆ.


ನಾಡಿನಲ್ಲಿ ಆಶಾಂತಿ,ಕಳ್ಳತನ, ದರೋಡೆ ,ಆಪಘಾತ ಹೀಗೆ ಅವಘಡಗಳಿಂದ ಸಾವು ನೋವುಗಳಾದಲ್ಲಿ ತಕ್ಷಣ ಮನೆ ಮಠ ಹೆಂಡ್ತಿ ಮಕ್ಕಳು ಸಂಸಾರವನ್ನು ಬಿಟ್ಟು ಹೋಗುವ ನಮ್ಮ ರಕ್ಷಣಾ ಇಲಾಖೆಯವರ ವಸತಿ ನಿಲಯಗಳೇ ಮಳೆಗೆ ಸೋರುವಂತಾಗಿದ್ದು ರಕ್ಷಣೆ ಮಾಡುವ ಪೊಲೀಸರ ಮನೆಗಳೇ ಹೀಗಾದರೆ ಆವರ ಕುಟುಂಬದವರ ಗತಿ ಏನು ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.


ಬಿಜೆಪಿ ಸರ್ಕಾರದ ರಾಜ್ಯದ ಗೃಹ ಸಚಿವ ಆರಗ ಜ್ಞಾನೇದ್ರರವರ ಗಮನಕ್ಕೆ ತರಲಾದರೂ ಸಮಸ್ಯೆಗೆ ಪರಿಹಾರ ಕಾಣದೇ ಸಮಸ್ಯೆಯಾಗಿಯೇ ಉಳಿಯುವಂತಾಗಿ ಪೊಲೀಸರು ತಮ್ಮ ಮನೆಯ ಮೇಲೆ ಪ್ಲಾಸ್ಟಿಕ್ ಹೊಂದಿಕೆಯ ರಕ್ಷಣೆ ಮಾಡಿಕೊಳ್ಳಬೇಕಾದ ಅನಿರ್ವಾತೆ ಎದುರಾಗಿದೆ.

ಕಟ್ಟಡದ ಕಾಮಗಾರಿ ನಡೆಯುವ ಸಂದರ್ಭದಲ್ಲಿಯೇ ಕಟ್ಟಡ ಕಳಪೆಯಾಗಿದೆ ಎಂದು ರಾಜ್ಯಮಟ್ಟದ ಪತ್ರಿಕೆಗಳು ಸಮಗ್ರ ವರದಿಯನ್ನು ಪ್ರಕಟಿಸಲಾಗಿದ್ದು ಉದ್ಘಾಟನೆಗೂ ಮುನ್ನವೇ ಕಳಪೆ ಕಾಮಗಾರಿಯನ್ನು ದುರಸ್ಥಿ ಮಾಡಲಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.ಒಟ್ಟಾರೆಯಾಗಿ ಹುಚ್ಚಮುಂಡೆ ಮದುವೆಯಲ್ಲಿ ಉಂಡವನೇ ಜಾಣ ಎಂಬ ಗಾದೆ ಮಾತಿನಂತೆ ಗುತ್ತಿಗೆದಾರರ ಬೇಜವಾಬ್ದಾರಿಯಿಂದಾಗಿ ಸರ್ಕಾರದ ಅನುದಾನ ಸದ್ಬಳಿಕೆ ಮಾಡುವಲ್ಲಿ ಸಂಪೂರ್ಣ ವಿಫಲಗೊಂಡಿರುವುದಕ್ಕೆ ಈ ಕಟ್ಟಡವೇ ಸಾಕ್ಷಿಯಾಗಿದೆ.

ಹಾಗೆಯೇ ಸುತ್ತಮುತ್ತಲು ಕಾಡಿನಂತೆ  ಗಿಡಗಂಟಿಗಳು ಬೆಳೆದಿದೆ.ಗಿಡಗಂಟಿಗಳನ್ನು ಸ್ವಚ್ಛಗೊಳಿಸದೆ ಇರುವುದರಿಂದ ಈ ವಸತಿಗೃಹಗಳ ಸೌಂದರ್ಯವೇ ಇದೀಗ ಪಾಳು ಬಿದ್ದಂತಿದೆ.
ಪಟ್ಟಣದ ಹೃದಯ ಭಾಗದಲ್ಲಿ ಇರುವ ಈ ಪೊಲೀಸ್ ವಸತಿ ಗೃಹಗಳು ಇತರೆ ಇಲಾಖೆಗೆ ಮಾದರಿಯಾಗಿರಬೇಕು.

ನಿತ್ಯ ಪೊಲೀಸರು ಒತ್ತಡದ ಕರ್ತವ್ಯದಲ್ಲಿದ್ದು ಈಗ ಮಳೆಯಾಗುತ್ತಿರುವ ಕಾರಣ ಮನೆ ತುಂಬ ಸೋರುವಂತಾಗಿ ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸುವುದೇ ಕಷ್ಟಕರವಾಗಿದೆ ಒಂದು ಕಡೆ ಕರ್ತವ್ಯದ ಒತ್ತಡ ಇನ್ನೊಂದುಕಡೆ ಮನೆ ಸೋರುವಂತಾಗಿ ಕುಟುಂಬದವರು ಹೇಗಿದ್ದಾರೋ ಎಂಬ ಚಿಂತೆಯಲ್ಲಿ ಕಾಲ ಕಳೆಯುವಂತಾಗಿದೆ.ಹಗಲು ರಾತ್ರಿ ಎನ್ನದೇ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಪೊಲೀಸ್ ಸಿಬ್ಬಂದಿಗೆ ಅವರ ರಕ್ಷಣೆ ಮಾಡಿಕೊಳ್ಳುವುದೇ ದುಸ್ಥರವಾಗಿರುವಾಗ ಸರ್ಕಾರ ಇನ್ನಾದರೂ ಇತ್ತ ಗಮನಹರಿಸುವುದರೊಂದಿಗೆ ಪೊಲೀಸ್ ವಸತಿ ನಿಲಯಕ್ಕೆ ಮುಕ್ತಿ ಕಲ್ಪಿಸರೇ ಕಾದುನೋಡಬೇಕಾಗಿದೆ.ಸ್ವಂತ ಕಟ್ಟಡಗಳಿಂದರೂ ಕೂಡಾ ಹಲವರು ಖಾಸಗಿ ಬಾಡಿಗೆ ಮನೆಗಳಲ್ಲಿ ವಾಸಮಾಡುವ ಸ್ಥಿತಿ ಎದುರಾಗಿದೆ.


ಸೋರುತ್ತಿರುವ ವಸತಿ ಗೃಹ ದುರಸ್ತಿ ಪಡಿಸುವಂತೆ ಹಾಗೂ ಸುತ್ತಮುತ್ತಲಿನ ಜಾಗವನ್ನು ಸ್ವಚ್ಛ ಮಾಡುವಂತೆ  ಜನ ಜಾಗೃತಿ ವೇದಿಕೆ ಅಧ್ಯಕ್ಷ ಟಿ ಆರ್ ಕೃಷ್ಣಪ್ಪ  ಸಂಬಂಧಪಟ್ಟವರಿಗೆ  ಮನವಿ ಸಲ್ಲಿಸಿದರು ಸಹ ದುರಸ್ತಿ ಹಾಗೂ ಸ್ವಚ್ಚಗೊಳಿಸುವ ಆಶ್ವಾಸನೆ ನೀಡಿದರೇ ಹೊರತು ಇದುವರೆಗೂ ಆ ಕೆಲಸ ಕಾರ್ಯಗತವಾಗಿಲ್ಲ.

ಇನ್ನಾದರೂ ಸಂಬಂಧಪಟ್ಟವರು ಈ ಪೊಲೀಸ್ ವಸತಿಗೃಹಕ್ಕೆ ಜೀವಕಳೆಯನ್ನು ನೀಡುವರೆ ಎಂದು ಕಾದುನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago