Headlines

ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ

ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ

ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು  ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ ಬಗೆಹರಿಸುವಂತೆ ಶಾಸಕರ ಆಪ್ತ ವಲಯದ ಸಣ್ಣಕ್ಕಿ ಮಂಜು ಅವರಿಗೆ ತಿಳಿಸಿದರು. ಶಾಲಾ ಮಕ್ಕಳು ದೂರದ ಮುಳುಗಡೆ ಪ್ರದೇಶದಿಂದ 7 -8 ಕಿ.ಮೀ ನಡೆದುಕೊಂಡು ಬರಬೇಕಾಗಿದ್ದು ಅಲ್ಲದೆ ತೀರ ಬಡ ಕುಟುಂಬದ ಮಕ್ಕಳು ಆದ ಕಾರಣ ಕೂಡಲೇ ಮಕ್ಕಳ ಶಿಕ್ಷಣಕ್ಕೆ ಸ್ಪಂದಿಸುವ ಮೂಲಕ ಈ ಸಮಸ್ಯೆ ಬಗೆಹರಿಸುವಂತೆ ಪೋಷಕರು ಅಧಿಕಾರಿಗಳನ್ನು ಒತ್ತಾಯಿಸಿದರು.

ತಾಲೂಕು ಪಂಚಾಯತ್ ಸಭಾಂಗಣಕ್ಕೆ ಪೋಷಕರು ಲಗ್ಗೆ ಇಟ್ಟ ವಿಷಯ ತಿಳಿದು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವೈ ನರೇಂದ್ರ ಕುಮಾರ್ ಶಾಸಕರ ಕಚೇರಿಗೆ ಆಗಮಿಸಿ ಶಾಸಕರ ಆಪ್ತವಲಯದ ಸಣ್ಣಕ್ಕಿ ಮಂಜುರವರೊಂದಿಗೆ ಸಮಾಲೋಚನೆ ನಡೆಸಿ ತಕ್ಷಣ ತಾಲೂಕು ಹಿಂದುಳಿದ ವರ್ಗದ ಕಲ್ಯಾಣಾಧಿಕಾರಿ ರಾಘವೇಂದ್ರ ಅವರನ್ನು ಕರೆಸಿ ಸಮಾಲೋಚನೆ ನಡೆಸಿ ಇನ್ನೆರಡು ದಿನದಲ್ಲಿ ಈ ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೊಡಸೆಯ ಗಿರೀಶ್ ಕೃಷ್ಣಪ್ಪ,  ಕಲಾವತಿ,  ತೊಗರೆ ಕೃಷ್ಣಮೂರ್ತಿ,  ಮಂಜಪ್ಪ, ಹೆಬ್ಬುರಳಿ ಹರೀಶ ಪದ್ಮಾವತಿ, ಲೀಲಾವತಿ ಪುರುಷೋತ್ತಮ್ ಮೊದಲಾದವರು  ಉಪಸ್ಥಿತರಿದ್ದರು

About The Author

Leave a Reply

Your email address will not be published. Required fields are marked *