ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ ವರಿಷ್ಠರು ನೇಮಕ ಮಾಡಿ ಆದೇಶಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಶಾಸಕಿಯಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಂತ ಶಾರದ ಪೂರ್ಯಾನಾಯಕ್ ಅವರಿಗೆ ಈಗ ಅದೃಷ್ಠ ಖುಲಾಯಿಸಿದೆ. ಜೆಡಿಎಸ್ ಪಕ್ಷದಿಂದ ವಿಧಾನಸಭೆಯ ನಾಯಕರಾಗಿ ಕುಮಾರಸ್ವಾಮಿ, ಉಪ ನಾಯಕರಾಗಿ ಶಾರದಾ ಪೂರ್ಯಾನಾಯಕ್ ನೇಮಕ ಮಾಡಲಾಗಿದೆ.
ಇನ್ನೂ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ ನೇಮಕ ಮಾಡಿದ್ದು, ದಲಿತ ಮಹಿಳಾ ಶಾಸಕಿಗೆ ಜೆಡಿಎಸ್ ಪಕ್ಷ ಕೊಟ್ಟ ಸದುದ್ದೇಶದ ಆದೇಶವಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.
ಬಿಜೆಪಿ ಪಕ್ಷದಿಂದ ವಿಪಕ್ಷ ನಾಯಕನ ಸೇರಿದಂತೆ ವಿಧಾನಸಭೆ, ಪರಿಷತ್ ನಾಯಕನ ಆಯ್ಕೆ ಕೂಡ ಮಾಡಿಲ್ಲ. ಈ ಸಂಬಂಧ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗಧಿಯಾಗಿದೆ. ಈ ಸಭೆಯಲ್ಲಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಇದಕ್ಕೂ ಮುಂಚೆಯೇ ಜೆಡಿಎಸ್ ಪಕ್ಷದಿಂದ ವಿಧಾನಸಭೆಯ ನಾಯಕರನ್ನಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಉಪ ನಾಯಕಿಯಾಗಿ ಶಾರದ ಪೂರ್ಯಾ ನಾಯ್ಕ್ ಆಯ್ಕೆ ಮಾಡಲಾಗಿದೆ.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…