ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ ವರಿಷ್ಠರು ನೇಮಕ ಮಾಡಿ ಆದೇಶಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಶಾಸಕಿಯಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಂತ ಶಾರದ ಪೂರ್ಯಾನಾಯಕ್ ಅವರಿಗೆ ಈಗ ಅದೃಷ್ಠ ಖುಲಾಯಿಸಿದೆ. ಜೆಡಿಎಸ್ ಪಕ್ಷದಿಂದ ವಿಧಾನಸಭೆಯ ನಾಯಕರಾಗಿ ಕುಮಾರಸ್ವಾಮಿ, ಉಪ ನಾಯಕರಾಗಿ ಶಾರದಾ ಪೂರ್ಯಾನಾಯಕ್ ನೇಮಕ ಮಾಡಲಾಗಿದೆ.
ಇನ್ನೂ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ ನೇಮಕ ಮಾಡಿದ್ದು, ದಲಿತ ಮಹಿಳಾ ಶಾಸಕಿಗೆ ಜೆಡಿಎಸ್ ಪಕ್ಷ ಕೊಟ್ಟ ಸದುದ್ದೇಶದ ಆದೇಶವಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.
ಬಿಜೆಪಿ ಪಕ್ಷದಿಂದ ವಿಪಕ್ಷ ನಾಯಕನ ಸೇರಿದಂತೆ ವಿಧಾನಸಭೆ, ಪರಿಷತ್ ನಾಯಕನ ಆಯ್ಕೆ ಕೂಡ ಮಾಡಿಲ್ಲ. ಈ ಸಂಬಂಧ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗಧಿಯಾಗಿದೆ. ಈ ಸಭೆಯಲ್ಲಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಇದಕ್ಕೂ ಮುಂಚೆಯೇ ಜೆಡಿಎಸ್ ಪಕ್ಷದಿಂದ ವಿಧಾನಸಭೆಯ ನಾಯಕರನ್ನಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಉಪ ನಾಯಕಿಯಾಗಿ ಶಾರದ ಪೂರ್ಯಾ ನಾಯ್ಕ್ ಆಯ್ಕೆ ಮಾಡಲಾಗಿದೆ.
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…